ಕುಸಿದುಬಿದ್ದ ಕಟ್ಟಡ 
ರಾಜ್ಯ

ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

ಬೆಂಗಳೂರಿನ ಬೆಳ್ಳಂದೂರು ಗೇಟ್ ಬಳಿ ಬುಧವಾರ ನಿರ್ಮಾಣ ಹಂತದ ಐದು ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿದ್ದು,...

ಬೆಂಗಳೂರು: ಬೆಂಗಳೂರಿನ ಬೆಳ್ಳಂದೂರು ಗೇಟ್ ಬಳಿ ಬುಧವಾರ ನಿರ್ಮಾಣ ಹಂತದ ಐದು ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿದ್ದು, ಅವಶೇಷಗಳಡಿ ಸಿಲುಕಿ ಸಾವನ್ನಪ್ಪಿದವರ ಸಂಖ್ಯೆ ಇದೀಗ ಎರಡಕ್ಕೇರಿದೆ.
ಕಾಮಗಾರಿ ವೇಳೆ ಏಕಾಏಕಿ ಕಟ್ಟಡ ಕುಸಿದು ಬಿದ್ದಿದ್ದು, ಅವಶೇಷಗಳಡಿ ಇನ್ನೂ ನಾಲ್ಕರಿಂದ ಐದು ಮಂದಿ ಸಿಲುಕಿರುವ ಸಾಧ್ಯತೆ ಇದೆ ಎಂದು ರಕ್ಷಣಾ ಸಿಬ್ಬಂದಿ ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಐದು ಅಗ್ನಿ ಶಾಮಕ ದಳದ ವಾಹನಗಳು  ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದೆ. ಈಗಗಾಲೇ 8 ವರ್ಷದ ಓರ್ವ ಬಾಲಕ ಸೇರಿದಂತೆ ನಾಲ್ವರನ್ನು ರಕ್ಷಿಸಲಾಗಿದ್ದು, ಇನ್ನೂ ನಾಲ್ವರು ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
ಪ್ರತ್ಯಕ್ಷದರ್ಶಿಗಳ ಪ್ರಕಾರ ಕಟ್ಟಡ ಕುಸಿಯುವುದಕ್ಕೂ ಮುನ್ನ ದೊಡ್ಡ ಸ್ಫೋಟದ ಶಬ್ದ ಕೇಳಿ ಬಂತು ಎಂದು ತಿಳಿದುಬಂದಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಕಟ್ಟಡದಲ್ಲಿ 20ಕ್ಕೂ ಅಧಿಕ ಕಾರ್ಮಿಕರು ಇದ್ದರು ಎಂದು ತಿಳಿದುಬಂದಿದೆ. ಪ್ರಸ್ತುತ ನಾಲ್ಕು ಮಂದಿಯನ್ನು  ರಕ್ಷಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಗಾಯಾಳುಗಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಮೇಯರ್ ಭೇಟಿ
ಘಟನಾ ಸ್ಥಳಕ್ಕೆ ಬಿಬಿಎಂಪಿ ಮೇಯರ್ ಜಿ.ಪದ್ಮಾವತಿ ಅವರು ಭೇಟಿ ನೀಡಿದ್ದು, ಪರಿಶೀಲನೆ ನಂತರ ಈ ಕಟ್ಟಡ ವಿನಯ್ ಕುಮಾರ್ ಧೋಂಗಲೆ ಎಂಬುವವರಿಗೆ ಸೇರಿದ್ದು, ಯಾರೇ ಆಗಿದ್ದರೂ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

SCROLL FOR NEXT