ನಿರ್ಮಾಣ ಹಂತದ ಕಟ್ಟಡ ಕುಸಿತ 
ರಾಜ್ಯ

ಬೆಳ್ಳಂದೂರು ಕಟ್ಟಡ ಕುಸಿತ ಪ್ರಕರಣ: ಸಾವಿನ ಸಂಖ್ಯೆ 6ಕ್ಕೇರಿಕೆ

ಬೆಳ್ಳಂದೂರು ಬಹುಮಹಡಿ ಕಟ್ಟಡ ಕುಸಿತ ಪ್ರಕರಣದಲ್ಲಿ ಸಾವಿಗೀಡಾದವರ ಸಂಖ್ಯೆ 6ಕ್ಕೇರಿದ್ದು, ರಕ್ಷಣಾ ಕಾರ್ಯಾಚರಣೆ ಶುಕ್ರವಾರವೂ ಮುಂದವರೆದಿದೆ.

ಬೆಂಗಳೂರು: ಬೆಳ್ಳಂದೂರು ಬಹುಮಹಡಿ ಕಟ್ಟಡ ಕುಸಿತ ಪ್ರಕರಣದಲ್ಲಿ ಸಾವಿಗೀಡಾದವರ ಸಂಖ್ಯೆ 6ಕ್ಕೇರಿದ್ದು, ರಕ್ಷಣಾ ಕಾರ್ಯಾಚರಣೆ ಶುಕ್ರವಾರವೂ ಮುಂದವರೆದಿದೆ.

ಇಂದು ಬೆಳಗ್ಗೆ ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದ ಎನ್ ಡಿಆರ್ ಎಫ್ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮತ್ತೊಂದು ಶವ ಪತ್ತೆಯಾಗಿದ್ದು, ಅವಶೇಷಗಳನ್ನು ತೆರವು ಗೊಳಿಸುವ  ಮೂಲಕ ಶವವನ್ನು ಹೊರತೆಗಿದಿದ್ದಾರೆ. ಆ ಮೂಲಕ ದುರಂತದಲ್ಲಿ ಸಾವಿಗೀಡಾದವರ ಸಂಖ್ಯೆ 6ಕ್ಕೇರಿದಂತಾಗಿದೆ.

ಕಟ್ಟಡದಲ್ಲಿ ಮತ್ತೆ ಯಾರಾದರೂ ಸಿಲುಕಿದ್ದಾರೆಯೇ ಎಂಬುದರ ಕುರಿತು ಶಂಕೆ ವ್ಯಕ್ತವಾಗುತ್ತಿದ್ದು, ಅವಶೇಷಗಳನ್ನು ತೆರವುಗೊಳಿಸುವ ಮೂಲಕ ಶೋಧ ನಡೆಸಲಾಗುತ್ತಿದೆ. ಇನ್ನು ಶೋಧ  ಕಾರ್ಯಾಚರಣೆಯಲ್ಲಿ ಅತ್ಯಾಧುನಿಕ ಸಲಕರಣೆಯೊಂದನ್ನು ಬಳಕೆ ಮಾಡುತ್ತಿದ್ದಾರೆ. ಅವಶೇಷಗಳಡಿ ಸಿಲುಕಿರುವವರನ್ನು ಶೋಧಿಸಲು ಅತ್ಯಾಧುನಿಕ ವಿಕ್ಟಿಮ್ ಡಿಟಕ್ಟರ್ ಸಾಧನ ಬಳಕೆ  ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಪ್ರಕರಣ ಸಂಬಂಧ ಈಗಾಗಲೇ ಕಟ್ಟಡದ ಗುತ್ತಿಗೆದಾರನನ್ನು ಬಂಧಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

T20 ವಿಶ್ವಕಪ್ 2026: ಮಂಡಿಯೂರಿದ PCB; ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಮೇಲಿನ ನಿರ್ಬಂಧ ತಳ್ಳಿಹಾಕಿದ ICC; ನಿಗದಿಯಂತೆ India vs Pak ಮ್ಯಾಚ್

BCCI ಆಟಗಾರರ ಒಪ್ಪಂದ: ಇಶಾನ್ ಕಿಶನ್, ಮಹಮದ್ ಶಮಿ, ಶ್ರೇಯಾಂಕ ಪಾಟೀಲ್ ಸೇರಿ 8 ಮಂದಿಗೆ ಗೇಟ್ ಪಾಸ್!

ಮೋದಿ ನಡೆ 'ಹೇಡಿತನದ ಪರಮಾವಧಿ'; ನರವಾಣೆ ಪುಸ್ತಕ 56 ಇಂಚಿನ ಎದೆಯೊಳಗಿನ ಪುಕ್ಕಲುತನ ಬಯಲು ಮಾಡಿದೆ!

ರಕ್ಷಣಾ ಕೈಗಾರಿಕಾ ಸಹಕಾರವನ್ನು ಹೆಚ್ಚಿಸುವ ಜಂಟಿ ಘೋಷಣೆಗೆ ಭಾರತ ಮತ್ತು ಗ್ರೀಸ್ ಸಹಿ!

T20 ವಿಶ್ವಕಪ್ 2026: ಕೆನಡಾ ವಿರುದ್ಧ ದಕ್ಷಿಣ ಆಫ್ರಿಕಾಗೆ 57 ರನ್ ಜಯ

SCROLL FOR NEXT