ನಿರ್ಮಾಣ ಹಂತದ ಕಟ್ಟಡ ಕುಸಿತ 
ರಾಜ್ಯ

ಬೆಳ್ಳಂದೂರು ಕಟ್ಟಡ ಕುಸಿತ ಪ್ರಕರಣ: ಸಾವಿನ ಸಂಖ್ಯೆ 6ಕ್ಕೇರಿಕೆ

ಬೆಳ್ಳಂದೂರು ಬಹುಮಹಡಿ ಕಟ್ಟಡ ಕುಸಿತ ಪ್ರಕರಣದಲ್ಲಿ ಸಾವಿಗೀಡಾದವರ ಸಂಖ್ಯೆ 6ಕ್ಕೇರಿದ್ದು, ರಕ್ಷಣಾ ಕಾರ್ಯಾಚರಣೆ ಶುಕ್ರವಾರವೂ ಮುಂದವರೆದಿದೆ.

ಬೆಂಗಳೂರು: ಬೆಳ್ಳಂದೂರು ಬಹುಮಹಡಿ ಕಟ್ಟಡ ಕುಸಿತ ಪ್ರಕರಣದಲ್ಲಿ ಸಾವಿಗೀಡಾದವರ ಸಂಖ್ಯೆ 6ಕ್ಕೇರಿದ್ದು, ರಕ್ಷಣಾ ಕಾರ್ಯಾಚರಣೆ ಶುಕ್ರವಾರವೂ ಮುಂದವರೆದಿದೆ.

ಇಂದು ಬೆಳಗ್ಗೆ ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದ ಎನ್ ಡಿಆರ್ ಎಫ್ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮತ್ತೊಂದು ಶವ ಪತ್ತೆಯಾಗಿದ್ದು, ಅವಶೇಷಗಳನ್ನು ತೆರವು ಗೊಳಿಸುವ  ಮೂಲಕ ಶವವನ್ನು ಹೊರತೆಗಿದಿದ್ದಾರೆ. ಆ ಮೂಲಕ ದುರಂತದಲ್ಲಿ ಸಾವಿಗೀಡಾದವರ ಸಂಖ್ಯೆ 6ಕ್ಕೇರಿದಂತಾಗಿದೆ.

ಕಟ್ಟಡದಲ್ಲಿ ಮತ್ತೆ ಯಾರಾದರೂ ಸಿಲುಕಿದ್ದಾರೆಯೇ ಎಂಬುದರ ಕುರಿತು ಶಂಕೆ ವ್ಯಕ್ತವಾಗುತ್ತಿದ್ದು, ಅವಶೇಷಗಳನ್ನು ತೆರವುಗೊಳಿಸುವ ಮೂಲಕ ಶೋಧ ನಡೆಸಲಾಗುತ್ತಿದೆ. ಇನ್ನು ಶೋಧ  ಕಾರ್ಯಾಚರಣೆಯಲ್ಲಿ ಅತ್ಯಾಧುನಿಕ ಸಲಕರಣೆಯೊಂದನ್ನು ಬಳಕೆ ಮಾಡುತ್ತಿದ್ದಾರೆ. ಅವಶೇಷಗಳಡಿ ಸಿಲುಕಿರುವವರನ್ನು ಶೋಧಿಸಲು ಅತ್ಯಾಧುನಿಕ ವಿಕ್ಟಿಮ್ ಡಿಟಕ್ಟರ್ ಸಾಧನ ಬಳಕೆ  ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಪ್ರಕರಣ ಸಂಬಂಧ ಈಗಾಗಲೇ ಕಟ್ಟಡದ ಗುತ್ತಿಗೆದಾರನನ್ನು ಬಂಧಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ಯಾವುದೇ ಸಂಪರ್ಕ ಕಡಿತಗೊಳ್ಳದೇ ಎಲ್ಲಾ ಇ-ಮೇಲ್ ಗಳನ್ನು Gmail ನಿಂದ Zoho Mail ಗೆ ವರ್ಗಾವಣೆ ಮಾಡುವುದು ಹೇಗೆ? ಸಿಗುವ ಸೌಲಭ್ಯಗಳೇನು? ಇಲ್ಲಿದೆ ಮಾಹಿತಿ

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

SCROLL FOR NEXT