ಮೋನಿಕಾ ಗುರ್ಡೆ 
ರಾಜ್ಯ

ಸುಗಂಧ ದ್ರವ್ಯ ತಜ್ಞೆ ಮೋನಿಕಾ ಹತ್ಯೆ: ಬೆಂಗಳೂರಿನಲ್ಲಿ ಆರೋಪಿ ಬಂಧನ

ಸುಗಂಧ ದ್ರವ್ಯ ತಜ್ಞೆ ಮೋನಿಕಾ ಗುರ್ಡೆ ಹತ್ಯೆ ಪ್ರಕರಣ ಸಂಬಂಧ ಬೆಂಗಳೂರಿನಲ್ಲಿ ಬಸವನಗುಡಿ ಪೊಲೀಸರು ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ...

ಬೆಂಗಳೂರು: ಸುಗಂಧ ದ್ರವ್ಯ ತಜ್ಞೆ ಮೋನಿಕಾ ಗುರ್ಡೆ ಹತ್ಯೆ ಪ್ರಕರಣ ಸಂಬಂಧ ಬೆಂಗಳೂರಿನಲ್ಲಿ ಬಸವನಗುಡಿ ಪೊಲೀಸರು ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ. 
ಗೋವಾದ ಪಣಜಿಯಿಂದ 10 ಕಿ.ಮೀ ದೂರದಲ್ಲಿರುವ ಸಂಗೋಲ್ಡದಲ್ಲಿ ಅಕ್ಟೋಬರ್ 6ರ ರಾತ್ರಿ ಮೋನಿಕಾಳನ್ನು ಆಕೆಯ ನಿವಾಸದಲ್ಲೇ ಕೊಲೆ ಮಾಡಲಾಗಿತ್ತು. ಮೋನಿಕಾಳ ಕೈಕಾಲು ಕಟ್ಟಿ ಉಸಿರುಗಟ್ಟಿಸಿ ಕೊಲೆ ಮಾಡಲಾಗಿತ್ತು. 
ಈ ಸಂಬಂಧ ಗೋವಾದ ಪೊಲೀಸರು ತನಿಖೆ ನಡೆಸುತ್ತಿದ್ದು ಮೋನಿಕಾಳ ಎಟಿಎಂ ಕಾರ್ಡ್ ಅನ್ನು ಬಳಸುತ್ತಿದ್ದ ಆರೋಪಿ ರಾಜಕುಮಾರ್ ಎಂಬಾತ ಗೋವಾದಲ್ಲಿ ಎರಡು ಬಾರಿ ಹಣ ಡ್ರಾ ಮಾಡಿದ್ದು ಬಳಿಕ ಬೆಂಗಳೂರಿನ ಎಟಿಎಂವೊಂದರಲ್ಲಿ ಹಣ ಡ್ರಾ ಮಾಡಿದ್ದರಿಂದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 
ಕಾಟನ್ ಪೇಟೆಯೊಂದರ ಲಾರ್ಡ್ಜ್ ವೊಂದರಲ್ಲಿ ವಾಸ್ತವ್ಯವಿದ್ದ ರಾಜಕುಮಾರನನ್ನು ಪೊಲೀಸರು ಬಂಧಿಸಿದ್ದಾರೆ. ಈ ವೇಳೆ ಆರೋಪಿ ರಾಜಕುಮಾರ್ ಮೋನಿಕಾಳ ಮನೆಯ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದು ಹಣಕ್ಕಾಗಿಯೇ ಮೋನಿಕಾಳನ್ನು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT