ಸಾಂದರ್ಭಿಕ ಚಿತ್ರ 
ರಾಜ್ಯ

ಆರೋಗ್ಯ ಸೇವೆಗೆ 2018 ಆಂಬ್ಯುಲೆನ್ಸ್ ಗಳು

ತುರ್ತು ಸಂದರ್ಭದಲ್ಲಿ ಸಾರ್ವಜನಿಕರಿಗೆ ತ್ವರಿತವಾಗಿ ಆಂಬ್ಯುಲೆನ್ಸ್‌ ಸೇವೆ ಲಭ್ಯವಾಗುವಂತೆ ಮಾಡಲು...

ಬೆಂಗಳೂರು: ತುರ್ತು ಸಂದರ್ಭದಲ್ಲಿ ಸಾರ್ವಜನಿಕರಿಗೆ ತ್ವರಿತವಾಗಿ ಆಂಬ್ಯುಲೆನ್ಸ್‌ ಸೇವೆ ಲಭ್ಯವಾಗುವಂತೆ ಮಾಡಲು ವಿವಿಧ ಯೋಜನೆ ಅಡಿ ಲಭ್ಯವಿರುವ ಎಲ್ಲಾ 2018 ಆಂಬ್ಯುಲೆನ್ಸ್ ಗಳನ್ನು ಆರೋಗ್ಯ ಕವಚ-108 ಯೋಜನೆ ಅಡಿ ವಿಲೀನಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಕುರಿತು ಅಧಿಕೃತ ಆದೇಶ ಕೂಡ ಹೊರಬಿದ್ದಿದೆ. 
ರಾಜ್ಯದ ಪ್ರಾಥಮಿಕ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ತುರ್ತು ಸಂದರ್ಭ ನಿರ್ವಹಿಸಲು ಪ್ರತಿ ಗ್ರಾಮೀಣ ಪ್ರದೇಶಗಳಲ್ಲಿ ಆಂಬ್ಯುಲೆನ್ಸ್‌ ದೊರೆಯುವಂತಿರಬೇಕು. ಈ ಪರಿಸ್ಥಿತಿ ನಿರ್ಮಾಣವಾಗಬೇಕಾದರೆ ಹಾಲಿ ಆರೋಗ್ಯ ಕವಚ ಯೋಜನೆ ಅಡಿ ಲಭ್ಯವಿರುವ ವಾಹನಗಳು ಸೇರಿ ಸುಮಾರು 2 ಸಾವಿರ ಆಂಬ್ಯುಲೆನ್ಸ್ ಗಳು ಬೇಕಾಗುತ್ತವೆ. ಹಾಗಾಗಿ ಆರೋಗ್ಯ ಕವಚ 108ರಡಿ ಕಾರ್ಯ ನಿರ್ವಹಿಸುತ್ತಿರುವ 711 ಆಂಬ್ಯುಲೆನ್ಸ್ ಗಳು ಸೇರಿದಂತೆ ವಿವಿಧ ಯೋಜನೆಗಳಡಿ ಲಭ್ಯವಿರುವ ಒಟ್ಟು 2018 ಆಂಬ್ಯುನೆಲ್ಸ್ ಗಳನ್ನು ಆರೋಗ್ಯ ಕವಚ-108ರಡಿ ವಿಲೀನಗೊಳಿಸಲಾಗುತ್ತಿದೆ.
ಆರೋಗ್ಯ ಕವಚ-108 ಸೇವೆಯು ತುರ್ತು ಹಾಗೂ ಅಪಘಾತಗಳ ಸಂದರ್ಭದಲ್ಲಿ ರೋಗಿಗಳು ಅಥವಾ ಗಾಯಾಳುಗಳಿಗೆ ಪ್ರಾಥಮಿಕ ಚಿಕಿತ್ಸೆ ಕೊಡುವುದರ ಜೊತೆಗೆ ತುರ್ತಾಗಿ ಆಸ್ಪತ್ರೆಗಳಿಗೆ ದಾಖಲಿಸುವ ಯೋಜನೆಯಾಗಿದೆ. 2008ರ ನವೆಂಬರ್ 1ರಂದು ರಾಜ್ಯ ಸರ್ಕಾರ ಈ ಯೋಜನೆ ಜಾರಿಗೆ ತಂದಿತ್ತು. ಆರೋಗ್ಯ ಕವಚ-108 ಯೋಜನೆಯಡಿ ಪ್ರತಿ 30 ಕಿಲೋ ಮೀಟರ್ ವ್ಯಾಪ್ತಿಗೆ ಒಂದು ಆಂಬ್ಯುಲೆನ್ಸ್ ಇರಬೇಕು ಎಂಬ ನಿಯಮ ಇದೆ. 
ಸರ್ಕಾರವೇ ನಿರ್ವಹಣೆ ಮಾಡಲಿ: ಕಡಿಮೆ ಅಂತರದ ವ್ಯಾಪ್ತಿಯಲ್ಲಿ ಹೆಚ್ಚು ಆಂಬ್ಯುಲೆನ್ಸ್ ಗಳು ಸಾರ್ವಜನಿಕರ ಸೇವೆಗೆ ಸಿಗಬೇಕು ಎಂಬ ಸರ್ಕಾರದ ಉದ್ದೇಶ ಚೆನ್ನಾಗಿದೆ. ಅವುಗಳ ನಿರ್ವಹಣೆಯನ್ನು ಈಗಾಗಲೇ ಆರೋಗ್ಯ ಕವಚ-108 ಆಂಬ್ಯುಲೆನ್ಸ್ ಗಳ ನಿರ್ವಹಣೆ ಮಾಡುತ್ತಿರುವ ಸಂಸ್ಥೆಯೇ ನಿರ್ವಹಣೆ ಮಾಡುವಂತಾದರೆ ಮತ್ತಷ್ಟು ಗೊಂದಲಗಳು ಹುಟ್ಟಿಕೊಳ್ಳುತ್ತವೆ.ಹಾಗಾಗಿ ಎಲ್ಲ ಆರೋಗ್ಯ ಕವಚ-108ರಡಿ ವಿಲೀನಗೊಳಿಸುವ ಯೋಜನೆಯನ್ನು ಸರ್ಕಾರವೇ ನಿರ್ವಹಣೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ಆರೋಗ್ಯ ಕವಚ (108) ಆಂಬ್ಯುಲೆನ್ಸ್‌ ನೌಕರರ ಸಂಘ ಒತ್ತಾಯಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!