ಸಾಂದರ್ಭಿಕ ಚಿತ್ರ 
ರಾಜ್ಯ

ಆರೋಗ್ಯ ಸೇವೆಗೆ 2018 ಆಂಬ್ಯುಲೆನ್ಸ್ ಗಳು

ತುರ್ತು ಸಂದರ್ಭದಲ್ಲಿ ಸಾರ್ವಜನಿಕರಿಗೆ ತ್ವರಿತವಾಗಿ ಆಂಬ್ಯುಲೆನ್ಸ್‌ ಸೇವೆ ಲಭ್ಯವಾಗುವಂತೆ ಮಾಡಲು...

ಬೆಂಗಳೂರು: ತುರ್ತು ಸಂದರ್ಭದಲ್ಲಿ ಸಾರ್ವಜನಿಕರಿಗೆ ತ್ವರಿತವಾಗಿ ಆಂಬ್ಯುಲೆನ್ಸ್‌ ಸೇವೆ ಲಭ್ಯವಾಗುವಂತೆ ಮಾಡಲು ವಿವಿಧ ಯೋಜನೆ ಅಡಿ ಲಭ್ಯವಿರುವ ಎಲ್ಲಾ 2018 ಆಂಬ್ಯುಲೆನ್ಸ್ ಗಳನ್ನು ಆರೋಗ್ಯ ಕವಚ-108 ಯೋಜನೆ ಅಡಿ ವಿಲೀನಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಕುರಿತು ಅಧಿಕೃತ ಆದೇಶ ಕೂಡ ಹೊರಬಿದ್ದಿದೆ. 
ರಾಜ್ಯದ ಪ್ರಾಥಮಿಕ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ತುರ್ತು ಸಂದರ್ಭ ನಿರ್ವಹಿಸಲು ಪ್ರತಿ ಗ್ರಾಮೀಣ ಪ್ರದೇಶಗಳಲ್ಲಿ ಆಂಬ್ಯುಲೆನ್ಸ್‌ ದೊರೆಯುವಂತಿರಬೇಕು. ಈ ಪರಿಸ್ಥಿತಿ ನಿರ್ಮಾಣವಾಗಬೇಕಾದರೆ ಹಾಲಿ ಆರೋಗ್ಯ ಕವಚ ಯೋಜನೆ ಅಡಿ ಲಭ್ಯವಿರುವ ವಾಹನಗಳು ಸೇರಿ ಸುಮಾರು 2 ಸಾವಿರ ಆಂಬ್ಯುಲೆನ್ಸ್ ಗಳು ಬೇಕಾಗುತ್ತವೆ. ಹಾಗಾಗಿ ಆರೋಗ್ಯ ಕವಚ 108ರಡಿ ಕಾರ್ಯ ನಿರ್ವಹಿಸುತ್ತಿರುವ 711 ಆಂಬ್ಯುಲೆನ್ಸ್ ಗಳು ಸೇರಿದಂತೆ ವಿವಿಧ ಯೋಜನೆಗಳಡಿ ಲಭ್ಯವಿರುವ ಒಟ್ಟು 2018 ಆಂಬ್ಯುನೆಲ್ಸ್ ಗಳನ್ನು ಆರೋಗ್ಯ ಕವಚ-108ರಡಿ ವಿಲೀನಗೊಳಿಸಲಾಗುತ್ತಿದೆ.
ಆರೋಗ್ಯ ಕವಚ-108 ಸೇವೆಯು ತುರ್ತು ಹಾಗೂ ಅಪಘಾತಗಳ ಸಂದರ್ಭದಲ್ಲಿ ರೋಗಿಗಳು ಅಥವಾ ಗಾಯಾಳುಗಳಿಗೆ ಪ್ರಾಥಮಿಕ ಚಿಕಿತ್ಸೆ ಕೊಡುವುದರ ಜೊತೆಗೆ ತುರ್ತಾಗಿ ಆಸ್ಪತ್ರೆಗಳಿಗೆ ದಾಖಲಿಸುವ ಯೋಜನೆಯಾಗಿದೆ. 2008ರ ನವೆಂಬರ್ 1ರಂದು ರಾಜ್ಯ ಸರ್ಕಾರ ಈ ಯೋಜನೆ ಜಾರಿಗೆ ತಂದಿತ್ತು. ಆರೋಗ್ಯ ಕವಚ-108 ಯೋಜನೆಯಡಿ ಪ್ರತಿ 30 ಕಿಲೋ ಮೀಟರ್ ವ್ಯಾಪ್ತಿಗೆ ಒಂದು ಆಂಬ್ಯುಲೆನ್ಸ್ ಇರಬೇಕು ಎಂಬ ನಿಯಮ ಇದೆ. 
ಸರ್ಕಾರವೇ ನಿರ್ವಹಣೆ ಮಾಡಲಿ: ಕಡಿಮೆ ಅಂತರದ ವ್ಯಾಪ್ತಿಯಲ್ಲಿ ಹೆಚ್ಚು ಆಂಬ್ಯುಲೆನ್ಸ್ ಗಳು ಸಾರ್ವಜನಿಕರ ಸೇವೆಗೆ ಸಿಗಬೇಕು ಎಂಬ ಸರ್ಕಾರದ ಉದ್ದೇಶ ಚೆನ್ನಾಗಿದೆ. ಅವುಗಳ ನಿರ್ವಹಣೆಯನ್ನು ಈಗಾಗಲೇ ಆರೋಗ್ಯ ಕವಚ-108 ಆಂಬ್ಯುಲೆನ್ಸ್ ಗಳ ನಿರ್ವಹಣೆ ಮಾಡುತ್ತಿರುವ ಸಂಸ್ಥೆಯೇ ನಿರ್ವಹಣೆ ಮಾಡುವಂತಾದರೆ ಮತ್ತಷ್ಟು ಗೊಂದಲಗಳು ಹುಟ್ಟಿಕೊಳ್ಳುತ್ತವೆ.ಹಾಗಾಗಿ ಎಲ್ಲ ಆರೋಗ್ಯ ಕವಚ-108ರಡಿ ವಿಲೀನಗೊಳಿಸುವ ಯೋಜನೆಯನ್ನು ಸರ್ಕಾರವೇ ನಿರ್ವಹಣೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ಆರೋಗ್ಯ ಕವಚ (108) ಆಂಬ್ಯುಲೆನ್ಸ್‌ ನೌಕರರ ಸಂಘ ಒತ್ತಾಯಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT