ಚಿನ್ನದ ಅಂಬಾರಿ ಹೊರಲಿರುವ ಅರ್ಜುನ 
ರಾಜ್ಯ

ವಿಶ್ವ ವಿಖ್ಯಾತ ಜಂಬೂಸವಾರಿಗೆ ಕ್ಷಣಗಣನೆ: 5ನೇ ಬಾರಿ ಅಂಬಾರಿ ಹೊರಲಿದ್ದಾನೆ ಅರ್ಜುನ

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ ಪ್ರಾರಂಭವಾಗಿದ್ದು, ಮೆರವಣಿಗೆಯ ಸೊಬಗನ್ನು ಸವಿಯಲು ಪ್ರವಾಸಿಗರು ಹಾಗೂ ...

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ ಪ್ರಾರಂಭವಾಗಿದ್ದು, ಮೆರವಣಿಗೆಯ ಸೊಬಗನ್ನು ಸವಿಯಲು ಪ್ರವಾಸಿಗರು ಹಾಗೂ ಸಾರ್ವಜನಿಕರು ಅರಮನೆಯತ್ತ ಆಗಮಿಸುತ್ತಿದ್ದಾರೆ.

ಸಾರ್ವಜನಿಕರ ವೀಕ್ಷಣೆಗೆ ಅನುಕೂಲವಾಗುವಂತೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಹಾಕಿರುವ ಶಾಮಿಯಾನಕ್ಕೆ ಬೆಳಗ್ಗೆಯಿಂದಲೇ ಸಾರ್ವಜನಿಕರು ಆಗಮಿಸುತ್ತಿದ್ದಾರೆ. ನವ ವಧುವನಿಂತೆ ಸಿಂಗಾರಗೊಂಡಿರುವ ಸಾಂಸ್ಕೃತಿಕ ನಗರಿ ಮೈಸೂರು ಎಲ್ಲರ ಕಣ್ಮನ ಸೆಳೆಯುತ್ತಿದೆ.

ಕಳೆದ ನಾಲ್ಕು ವರ್ಷಗಳಿಂದ ಜಂಬೂ ಸವಾರಿ ಮೆರವಣಿಗೆಯಲ್ಲಿ ಚಿನ್ನದ ಅಂಬಾರಿ ಹೊತ್ತು ಯಶ್ವಸಿ ನಾಯಕನಾಗಿರುವ ಗಜಪಡೆ ಕ್ಯಾಪ್ಟನ್ ಅರ್ಜುನ ಇಂದು 5 ನೇ ಬಾರಿಗೆ ಅಂಬಾರಿ ಹೊತ್ತು ರಾಜ ಗಾಂಭೀರ್ಯದಿಂದ ನಡೆಯಲಿದ್ದಾನೆ. ದಸರಾ ಆರಂಭದಿಂದ 9 ದಿನಗಳು ನಡೆದ ತಾಲೀಮಿನಲ್ಲಿ ಅರ್ಜುನ ಯಶಸ್ವಿಯಾಗಿದ್ದಾನೆ. ಇಂದು ನಡೆಯುವ ಜಂಬೂ ಸವಾರಿ ಮೆರವಣಿಗೆಯಲ್ಲಿ ಜನಸಾಗರವೇ ಹರಿದು ಬಂದಿರುತ್ತದೆ.

ಇದುವರೆಗೂ ಅರ್ಜುನನ್ನು ಮಾವುತ ದೊಡ್ಡ ಮಾಸ್ತಿ ನೋಡಿಕೊಳ್ಳುತ್ತಿದ್ದರು, ಆದರೆ ದೊಡ್ಡ ಮಾಸ್ತಿ ಸಾವನ್ನಪ್ಪಿದ ಕಾರಣ ಅವರ ಮಗ ಮಹೇಶ್ ನೋಡಿಕೊಳ್ಳುತ್ತಿದ್ದಾರೆ. ಇದೇ ಮೊದಲ ಬಾರಿಗೆ ದಸರಾ ಮೆರವಣಿಗೆಯಲ್ಲಿ ಅಂಬಾರಿ ಹೊರಲಿರುವ ಅರ್ಜುನನ್ನು ಮುನ್ನಡೆಸಲು ಮಹೇಶ್ ಮುನ್ನಡೆಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!