ಕೇಂದ್ರ ಪೆಟ್ರೋಲಿಯಂ ಖಾತೆ ರಾಜ್ಯ ಸಚಿವ ಧರ್ಮೇಂದ್ರ ಪ್ರಧಾನ್ 
ರಾಜ್ಯ

2022ರ ವೇಳೆಗೆ ಇಂಧನ ಆಮದು ಶೇಕಡಾ 10ರಷ್ಟು ಕಡಿಮೆ ಮಾಡಲು ಕ್ರಮ: ಧರ್ಮೇಂದ್ರ ಪ್ರಧಾನ್

2022ರ ವೇಳೆಗೆ ತೈಲ ಮತ್ತು ನೈಸರ್ಗಿಕ ಅನಿಲ ಬಳಕೆ ಮೇಲಿನ ಅವಲಂಬನೆಯನ್ನು...

ಬೆಂಗಳೂರು: 2022ರ ವೇಳೆಗೆ ತೈಲ ಮತ್ತು ನೈಸರ್ಗಿಕ ಅನಿಲ ಬಳಕೆ ಮೇಲಿನ ಅವಲಂಬನೆಯನ್ನು ಶೇಕಡಾ 10ರಷ್ಟು ಕಡಿಮೆಗೊಳಿಸುವ ಗುರಿಯನ್ನು ಭಾರತ ಹೊಂದಿದೆ ಎಂದು ಕೇಂದ್ರ ಪೆಟ್ರೋಲಿಯಂ ಖಾತೆ ರಾಜ್ಯ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.
ಡಿಸ್ಕವರ್ಡ್ ಸ್ಮಾಲ್ ಫೀಲ್ಡ್ ಬಿಡ್ ರೌಂಡ್ 2016 ಕಾರ್ಯಕ್ರಮದಲ್ಲಿ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇನ್ನು5-6 ವರ್ಷಗಳಲ್ಲಿ ದೇಶೀಯವಾಗಿ ತೈಲ ಮತ್ತು ಅನಿಲದ ಉತ್ಪಾದನೆಯನ್ನು ಹೆಚ್ಚಿಸಿ ವಿದೇಶಗಳಿಂದ ಇಂಧನವನ್ನು ಆಮದು ಮಾಡಿಕೊಳ್ಳುವುದನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರ ಹಲವು ಸುಧಾರಣಾ ಕ್ರಮಗಳನ್ನು ತೈಲ ಮತ್ತು ಅನಿಲ ವಲಯಗಳಲ್ಲಿ ತೆಗೆದುಕೊಂಡಿದೆ. ಹೊಸ ದೇಶೀಯ ಅನಿಲ ಬೆಲೆ ಮಾರ್ಗಸೂಚಿ, ಹೈಡ್ರೋಕಾರ್ಬನ್ ಪರಿಶೋಧನೆ ಮತ್ತು ಪರವಾನಗಿ ನೀತಿಯ ಉದಾರೀಕರಣ ಮೊದಲಾದ ಉಪಕ್ರಮಗಳನ್ನು ಅವರು ವಿವರಿಸಿದರು.
ಡಿಸ್ಕವರ್ಡ್ ಸ್ಮಾಲ್ ಫೀಲ್ಡ್ಸ್ ಬಿಡ್ ಯೋಜನೆಯನ್ನು ಹೆಲ್ಪ್ ವಿಸ್ತಾರ ನೀತಿಯಡಿ ಪರಿಚಯಿಸಲಾಗುತ್ತಿದ್ದು, ತೈಲ ಮತ್ತು ಅನಿಲ ನಿಕ್ಷೇಪಗಳು ತೆರವು ಮತ್ತು ಪರಿಶೋಧನೆಗೆ 9 ಸಂಚಿತ ಶಿಲೆಗಳು ಮತ್ತು 67 ನಿಕ್ಷೇಪಗಳು ಮತ್ತು 46 ಗುತ್ತಿಗೆಗಳನ್ನು ಒಳಗೊಂಡಿವೆ. ಅಲ್ಲಿಂದ ತೈಲ ಮತ್ತು ಅನಿಲಗಳನ್ನು ಹೊರತೆಗೆಯಲಾಗುತ್ತದೆ ಎಂದು ಪತ್ರಿಕಾ ಹೇಳಿಕೆ ತಿಳಿಸಿದೆ.
67 ನಿಕ್ಷೇಪಗಳಲ್ಲಿ 17 ದಕ್ಷಿಣ ಭಾರತದಲ್ಲಿದ್ದು, 8 ಆಂಧ್ರ ಪ್ರದೇಶ, 2 ತಮಿಳು ನಾಡು ಮತ್ತು 7 ಕರ್ನಾಟಕದ ಕೋಲಾರ ಜಿಲ್ಲೆಗಳಲ್ಲಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT