ರಾಜ್ಯ

ಸೋಮವಾರಪೇಟೆ ಸಮೀಪ ಕಾರು ಅಪಘಾತ, ಮೈಸೂರಿನ ಮೂವರು ಯುವಕರು ಸಾವು

Lingaraj Badiger
ಸೋಮವಾರಪೇಟೆ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ತಡೆ ಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು ದಾರುಣವಾಗಿ ಮೃತಪಟ್ಟಿರುವ ಹಾಗೂ ಮೂವರು ಗಾಯಗೊಂಡಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಬಸವನಹಳ್ಳಿಯಲ್ಲಿ ಶನಿವಾರ ತಡರಾತ್ರಿ ನಡೆದಿದೆ.
ಮೃತರನ್ನು ಮೈಸೂರಿನ ಕೆ.ಜಿ.ಕೊಪ್ಪಲಿನಿಂದ ಪ್ರವಾಸಕ್ಕೆ ತೆರಳಿದ್ದ ನಂದೀಶ್(19) ಚೇತನ್(18) ಹಾಗೂ ಚಂದ್ರು(19) ಎಂದು ಗುರುತಿಸಲಾಗಿದ್ದು, ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಪ್ರತಾಪ್, ಸುಹಾಸ್ ಹಾಗೂ ಶಿವಕುಮಾರ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕಾರಿನಲ್ಲಿ ಮದ್ಯದ ಬಾಟಲಿಗಳು ಪತ್ತೆಯಾಗಿವೆ ಎಂದು ಹೇಳಲಾಗಿದ್ದು, ಮದ್ಯದ ಅಮಲು ಅವಘಡಕ್ಕೆ ಕಾರಣ ಎನ್ನಲಾಗಿದೆ. 
ಈ ಸಂಬಂಧ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
SCROLL FOR NEXT