ಉಮೇಶ್ ರೆಡ್ಡಿ 
ರಾಜ್ಯ

ವಿಕೃತ ಕಾಮಿ ಉಮೇಶ್‌ ರೆಡ್ಡಿಗೆ ಗಲ್ಲು: ಹಿಂಡಲಗಾ ಜೈಲು ಸಿಬ್ಬಂದಿಗೆ ತರಬೇತಿ

ವಿಕೃತಕಾಮಿ ಉಮೇಶ್ ರೆಡ್ಡಿ ಕ್ಷಮಾದಾನ ಅರ್ಜಿಯನ್ನ ಸುಪ್ರಿಂಕೋರ್ಟ್ ತಿರಸ್ಕರಿಸಿದ ಹಿನ್ನೆಲೆಯಲ್ಲಿ ಹಿಂಡಲಗಾ ಜೈಲಿನ ಸಿಬ್ಬಂದಿಗೆ ಗಲ್ಲಿಗೇರಿಸುವ ಸಂಬಂಧ....

ಬೆಳಗಾವಿ: ವಿಕೃತಕಾಮಿ ಉಮೇಶ್ ರೆಡ್ಡಿ ಕ್ಷಮಾದಾನ ಅರ್ಜಿಯನ್ನ ಸುಪ್ರಿಂಕೋರ್ಟ್ ತಿರಸ್ಕರಿಸಿದ ಹಿನ್ನೆಲೆಯಲ್ಲಿ ಹಿಂಡಲಗಾ ಜೈಲಿನ ಸಿಬ್ಬಂದಿಗೆ ಗಲ್ಲಿಗೇರಿಸುವ ಸಂಬಂಧ ತರಬೇತಿ ನೀಡಲಾಗುತ್ತಿದೆ. 33 ವರ್ಷಗಳ ನಂತರ ಹಿಂಡಲಗಾ ಜೈಲಿನಲ್ಲಿ ನೇಣಿಗೇರುತ್ತಿರುವ ಅಪರಾಧಿ ಉಮೇಶ್ ರೆಡ್ಡಿ ಆಗಿದ್ದಾನೆ,

ನೇಣಿಗೇರಿಸುವ ಕುರಿತು 7 ಸಿಬ್ಬಂದಿಗೆ ದಿನಂಪ್ರತಿ ತರಬೇತಿ ನೀಡಲಾಗುತ್ತಿದೆ.ಗಲ್ಲು ಶಿಕ್ಷೆಗೆ ಗುರಿಯಾಗಿರುವ ಉಮೇಶ್‌ ರೆಡ್ಡಿಯ ಗಾತ್ರದ ಪ್ರತಿಕೃತಿ ತಯಾರಿಸಿ, ಅದಕ್ಕೆ ನೇಣು  ಹಾಕುವ ಬಗ್ಗೆ ತರಬೇತಿ ನೀಡಲಾಗುತ್ತಿದೆ. ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ಆಗುವವರೆಗೂ ಈ ತರಬೇತಿ ಮುಂದುವರಿಯುತ್ತದೆ.

ಸಿಬ್ಬಂದಿಗೆ ಮಾನಸಿಕ ತರಬೇತಿ ಕೂಡ ನೀಡಲಾಗುತ್ತಿದೆ. ಉಮೇಶ್ ರೆಡ್ಡಿಯನ್ನು ಗಲ್ಲಿಗೆ ಹಾಕುವಾಗ ಅವರ ಮನಸ್ಸು ಸ್ಥಿಮಿತ ಕಳೆದುಕೊಳ್ಳದಂತೆ ತರಬೇತಿ ನೀಡಲಾಗುತ್ತಿದೆ.

ಕಾರಾಗೃಹದಲ್ಲಿ ಬಂದೋಬಸ್ತ್‌ಗಾಗಿ ಬೇರೆ ಜಿಲ್ಲೆಗಳ ಪೊಲೀಸರನ್ನೂ ಕರೆಸಲಾಗಿದ್ದು, ಇವರೆಲ್ಲ ಉಮೇಶ್ ರೆಡ್ಡಿ ಚಲನವಲನಗಳ ಮೇಲೆ ನಿಗಾ ಇಟ್ಟಿದ್ದಾರೆ. ದಾರವಾಢ, ಬಾದಾಮಿ, ವಿಜಯಾಪುರ,ಮತ್ತು ಕೊಪ್ಪಳ ಜೈಲುಗಳ 10 ಹಿರಿಯ ಜೈಲರ್ ಗಳನ್ನು ಹೆಚ್ಚುವರಿಯಾಗಿ ನಿಯೋಜಿಸಲಾಗಿದೆ.

ಕ್ಷಮಾಧಾನ ಅರ್ಜಿಯನ್ನು ಸುಪ್ರಿಂಕೋರ್ಟ್ ತಿರಸ್ಕರಿಸಿದ ಪ್ರತಿಯನ್ನು ಉಮೇಶ್ ರೆಡ್ಡಿಗೆ ಜೈಲು ಅಧಿಕಾರಿಗಳು ತೋರಿಸಿದ್ದಾರೆ. ಈ ಸಂಬಂಧ ಪ್ರತಿಕ್ರಿಯಿಸಿರುವ ಅವನು ಇದೆಲ್ಲಾ ದೇವರ ಇಚ್ಚೆ ಎಂದು ಹೇಳಿದ್ದಾನೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT