ಆಮಂತ್ರಣ ಪತ್ರಿಕೆ 
ರಾಜ್ಯ

ಜನಾರ್ಧನ ರೆಡ್ಡಿ ಪುತ್ರಿಯ ವಿವಾಹದ ಅದ್ಧೂರಿ 'ವಿಡಿಯೋ' ಆಮಂತ್ರಣ ಪತ್ರಿಕೆ

ಮಾಜಿ ಸಚಿವ ಹಾಗೂ ಗಣಿ ಧಣಿ ಜನಾರ್ದನರೆಡ್ಡಿ ಪುತ್ರಿ ಬ್ರಹ್ಮಿಣಿಯ ಮದುವೆಗೆ ಭರದ ಸಿದ್ಧತೆ ನಡೆದಿದೆ...

ಬೆಂಗಳೂರು: ಮಾಜಿ ಸಚಿವ ಹಾಗೂ ಗಣಿ ಧಣಿ ಜನಾರ್ದನರೆಡ್ಡಿ ಪುತ್ರಿ ಬ್ರಹ್ಮಿಣಿಯ ಮದುವೆಗೆ ಭರದ ಸಿದ್ಧತೆ ನಡೆದಿದೆ.

 ಬೆಂಗಳೂರಿನ ಅರಮನೆ ಮೈದಾನದಲ್ಲಿ ಹೈದರಾಬಾದ್‌ ಮೂಲದ ಉದ್ಯಮಿಯ ಪುತ್ರ ರಾಜೀವ್‌ ರೆಡ್ಡಿ ಅವರೊಂದಿಗೆ ನವೆಂಬರ್‌ 16ರಂದು ನಡೆಯಲಿದೆ. ಈ ಮದುವೆಗೆ ರೆಡ್ಡಿ ಕುಟುಂಬ ವಿಶಿಷ್ಟ ರೀತಿಯ ಆಹ್ವಾನ ಪತ್ರಿಕೆಯನ್ನು ಸಿದ್ಧಪಡಿಸಿದೆ.

ಎಲ್‌ಇಡಿ ಪರದೆ ಮೇಲೆ ರೆಡ್ಡಿ ದಂಪತಿ ಹಾಡಿನ ಮೂಲಕ ಆಹ್ವಾನ ನೀಡುವ ಆಮಂತ್ರಣ ಪತ್ರಿಕೆ ಸಿದ್ಧಪಡಿಸಲಾಗಿದೆ.

ಬಾದಾಮಿ, ಗೋಡಂಬಿ ಮುಂತಾದ ಒಣ ಹಣ್ಣುಗಳು ತುಂಬಿರುವ ಈ ವಿಶೇಷ ಆಮಂತ್ರಣ ಪತ್ರಿಕೆಯು ಶೀಘ್ರದಲ್ಲೇ ರಾಜ್ಯದ ಎಲ್ಲಾ ಜಿಲ್ಲೆಗಳ ಹಿತೈಷಿಗಳಿಗೆ, ಮುಖಂಡರಿಗೆ ತಲುಪಲಿದೆ.

ಹಿಂದೆ ಯಾರು ಮಾಡಿರದಂತ ಮದುವೆ ಸಮಾರಂಭ ಮಾಡಲು ನಿರ್ಧರಿಸಿರುವ ರೆಡ್ಡಿ ಆಮಂತ್ರಣ ಪತ್ರಿಕೆಯಲ್ಲಿ ಹಾಡಿನ ಮೂಲಕ ಆಹ್ವಾನ ನೀಡಿದ್ದಾರೆ. ಆಮಂತ್ರಣ ಪತ್ರಿಕೆ ತೆರೆದರೆ ಮಿನಿ ಎಲ್ ಸಿಡಿ ಪರದೆಯ ಮೇಲೆ ರೆಡ್ಡಿ ಕುಟುಂಬದ ಆಹ್ವಾನದ ಹಾಡು ಆಟೋ ಪ್ಲೇ ಆಗುತ್ತದೆ. ರೆಡ್ಡಿ ದಂಪತಿ, ಪುತ್ರ ಪುತ್ರಿ ಹಾಗೂ ಅಳಿಯ ಈ ಆಹ್ವಾನ ಪತ್ರಿಕೆಯ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT