ಹೈಕೋರ್ಟ್ 
ರಾಜ್ಯ

ಮಲ್ಲೇಶ್ವರಂ ಸ್ಫೋಟ ಪ್ರಕರಣ: ಸಂತ್ರಸ್ತೆ ಲಿಷಾ ಗೆ ಸರ್ಕಾರಿ ನೌಕರಿ ನೀಡಲು 'ಹೈ' ಆದೇಶ

2013ರ ಏಪ್ರಿಲ್‌ 17ರಂದು ಮಲ್ಲೇಶ್ವರದ ಬಿಜೆಪಿ ಕಚೇರಿ ಮುಂಭಾಗ ನಡೆದ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಗಾಯಗೊಂಡ ಲಿಷಾಗೆ 4 ತಿಂಗಳಲ್ಲಿ ಸರ್ಕಾರಿ ಉದ್ಯೋಗ ...

ಬೆಂಗಳೂರು:  2013ರ ಏಪ್ರಿಲ್‌ 17ರಂದು ಮಲ್ಲೇಶ್ವರದ ಬಿಜೆಪಿ ಕಚೇರಿ ಮುಂಭಾಗ ನಡೆದ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಗಾಯಗೊಂಡ ಲಿಷಾಗೆ 4 ತಿಂಗಳಲ್ಲಿ ಸರ್ಕಾರಿ ಉದ್ಯೋಗ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಆದೇಶಿಸಿದೆ.

ಭಯೋತ್ಪಾದನಾ ಕೃತ್ಯಗಳಲ್ಲಿ ಸಂತ್ರಸ್ತರಾದವರಿಗೆ ಪರಿಹಾರ ನೀಡುವ ದಿಸೆಯಲ್ಲಿ ರಾಷ್ಟ್ರೀಯ ನೀತಿ  ರೂಪಿಸಬೇಕು ಹಾಗೂ ನನಗೆ  ಒಂದು ಕೋಟಿ ರು, ಪರಿಹಾರ ನೀಡಲು ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಲಿಷಾ ಪರ ವಕೀಲ ಸುನೀಲ್ ಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎ.ಎಸ್‌.ಬೋಪಣ್ಣ ಅವರಿದ್ದ ಏಕಸದಸ್ಯ ಪೀಠ  ಸೋಮವಾರ ವಿಲೇವಾರಿ ಮಾಡಿದೆ.

ಘಟನೆಗೆ  ಗುಪ್ತಚರ ವಿಭಾಗದ ವೈಫಲ್ಯ ಕಾರಣ ಎಂಬ ಅರ್ಜಿದಾರರ ಆರೋಪವನ್ನು ಕುರುಡಾಗಿ ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಈ   ಘಟನೆಯಲ್ಲಿ ಲಿಷಾ ಶೇಕಡ 50ಕ್ಕೂ ಹೆಚ್ಚು ಪ್ರಮಾಣದ ಅಂಗವಿಕಲತೆಗೆ ಒಳಗಾಗಿದ್ದಾಳೆ ಮತ್ತು  ಇದು ಈಕೆಯ ಭವಿಷ್ಯಕ್ಕೆ ಭಾರಿ ಪೆಟ್ಟು ನೀಡಿದೆ. ಆದ್ದರಿಂದ ಕೇಂದ್ರ ಸರ್ಕಾರ ಪರಿಹಾರದ ಮೊತ್ತವನ್ನು ಅತ್ಯಂತ ವಿವೇಚನೆಯಿಂದ ನಿರ್ಧರಿಸಬೇಕು’ ಎಂದೂ ಆದೇಶದಲ್ಲಿ ವಿವರಿಸಲಾಗಿದೆ.

ಅಂಗವಿಕಲ ಕೋಟಾದಡಿ ಲಿಷಾಗೆ ಸರ್ಕಾರಿ ಉದ್ಯೋಗ ನೀಡಿ, ಬಾಕಿಯಿರುವ ಆಕೆಯ ಆಸ್ಪತ್ರೆ ವೆಚ್ಚವನ್ನು ಭರಿಸಬೇಕೆಂದು ಸರ್ಕಾರಕ್ಕೆ ಹೈ ಕೋರ್ಟ್ ನಿರ್ದೇಶಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT