ಹೈಕೋರ್ಟ್ 
ರಾಜ್ಯ

ಮಲ್ಲೇಶ್ವರಂ ಸ್ಫೋಟ ಪ್ರಕರಣ: ಸಂತ್ರಸ್ತೆ ಲಿಷಾ ಗೆ ಸರ್ಕಾರಿ ನೌಕರಿ ನೀಡಲು 'ಹೈ' ಆದೇಶ

2013ರ ಏಪ್ರಿಲ್‌ 17ರಂದು ಮಲ್ಲೇಶ್ವರದ ಬಿಜೆಪಿ ಕಚೇರಿ ಮುಂಭಾಗ ನಡೆದ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಗಾಯಗೊಂಡ ಲಿಷಾಗೆ 4 ತಿಂಗಳಲ್ಲಿ ಸರ್ಕಾರಿ ಉದ್ಯೋಗ ...

ಬೆಂಗಳೂರು:  2013ರ ಏಪ್ರಿಲ್‌ 17ರಂದು ಮಲ್ಲೇಶ್ವರದ ಬಿಜೆಪಿ ಕಚೇರಿ ಮುಂಭಾಗ ನಡೆದ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಗಾಯಗೊಂಡ ಲಿಷಾಗೆ 4 ತಿಂಗಳಲ್ಲಿ ಸರ್ಕಾರಿ ಉದ್ಯೋಗ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಆದೇಶಿಸಿದೆ.

ಭಯೋತ್ಪಾದನಾ ಕೃತ್ಯಗಳಲ್ಲಿ ಸಂತ್ರಸ್ತರಾದವರಿಗೆ ಪರಿಹಾರ ನೀಡುವ ದಿಸೆಯಲ್ಲಿ ರಾಷ್ಟ್ರೀಯ ನೀತಿ  ರೂಪಿಸಬೇಕು ಹಾಗೂ ನನಗೆ  ಒಂದು ಕೋಟಿ ರು, ಪರಿಹಾರ ನೀಡಲು ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಲಿಷಾ ಪರ ವಕೀಲ ಸುನೀಲ್ ಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎ.ಎಸ್‌.ಬೋಪಣ್ಣ ಅವರಿದ್ದ ಏಕಸದಸ್ಯ ಪೀಠ  ಸೋಮವಾರ ವಿಲೇವಾರಿ ಮಾಡಿದೆ.

ಘಟನೆಗೆ  ಗುಪ್ತಚರ ವಿಭಾಗದ ವೈಫಲ್ಯ ಕಾರಣ ಎಂಬ ಅರ್ಜಿದಾರರ ಆರೋಪವನ್ನು ಕುರುಡಾಗಿ ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಈ   ಘಟನೆಯಲ್ಲಿ ಲಿಷಾ ಶೇಕಡ 50ಕ್ಕೂ ಹೆಚ್ಚು ಪ್ರಮಾಣದ ಅಂಗವಿಕಲತೆಗೆ ಒಳಗಾಗಿದ್ದಾಳೆ ಮತ್ತು  ಇದು ಈಕೆಯ ಭವಿಷ್ಯಕ್ಕೆ ಭಾರಿ ಪೆಟ್ಟು ನೀಡಿದೆ. ಆದ್ದರಿಂದ ಕೇಂದ್ರ ಸರ್ಕಾರ ಪರಿಹಾರದ ಮೊತ್ತವನ್ನು ಅತ್ಯಂತ ವಿವೇಚನೆಯಿಂದ ನಿರ್ಧರಿಸಬೇಕು’ ಎಂದೂ ಆದೇಶದಲ್ಲಿ ವಿವರಿಸಲಾಗಿದೆ.

ಅಂಗವಿಕಲ ಕೋಟಾದಡಿ ಲಿಷಾಗೆ ಸರ್ಕಾರಿ ಉದ್ಯೋಗ ನೀಡಿ, ಬಾಕಿಯಿರುವ ಆಕೆಯ ಆಸ್ಪತ್ರೆ ವೆಚ್ಚವನ್ನು ಭರಿಸಬೇಕೆಂದು ಸರ್ಕಾರಕ್ಕೆ ಹೈ ಕೋರ್ಟ್ ನಿರ್ದೇಶಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT