ಶಾಸಕ ನಾರಾಯಣ ಗೌಡ 
ರಾಜ್ಯ

ನೀರಿಗಾಗಿ ಸರ್ಕಾರಿ ಅಧಿಕಾರಿಯನ್ನೇ ಎಳೆದಾಡಿ ಹಲ್ಲೆಗೆ ಯತ್ನಿಸಿದ ಜೆಡಿಎಸ್‌ ಶಾಸಕ!

ನೀರಿಗಾಗಿ ಕೆ.ಆರ್‌.ಪೇಟೆ ಜೆಡಿಎಸ್‌ ಶಾಸಕ ನಾರಾಯಣ ಗೌಡ ಅವರು ಸರ್ಕಾರಿ ಅಧಿಕಾರಿಯೊಬ್ಬರನ್ನು ಎಳೆದಾಡಿ, ಅವರ...

ಮಂಡ್ಯ: ನೀರಿಗಾಗಿ ಕೆ.ಆರ್‌.ಪೇಟೆ ಜೆಡಿಎಸ್‌ ಶಾಸಕ ನಾರಾಯಣ ಗೌಡ ಅವರು ಸರ್ಕಾರಿ ಅಧಿಕಾರಿಯೊಬ್ಬರನ್ನು ಎಳೆದಾಡಿ, ಅವರ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ  ಬುಧವಾರ ನಡೆದಿದೆ.
ರೈತರ ಬೆಳೆಗೆ ಅಗತ್ಯ ನೀರು ಬಿಡದ ಹಿನ್ನಲೆಯಲ್ಲಿ ನಾರಾಯಣ ಗೌಡ ಅವರು ಇಂದು ತಮ್ಮ ಬೆಂಬಲಿಗರೊಂದಿಗೆ ಹೇಮಾವತಿ ಡ್ಯಾಂ ಯೋಜನೆಯ ಇಂಜಿನಿಯರ್‌ ಕಚೇರಿಗೆ ತೆರಳಿ, ಇಂಜಿನಿಯರ್‌ ನಾರಾಯಣ್‌ ಅವರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ, ಟೇಬಲ್‌ ಮೇಲಿದ್ದ ಪುಸ್ತಕಗಳನ್ನು ಚೆಲ್ಲಾಡಿದ್ದಾರೆ.
ನೀರು ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಇಂಜಿನಿಯರ್ ಜೊತೆ ಚರ್ಚಿಸುತ್ತಿದ್ದ ನಾರಾಯಣಗೌಡ ಅವರು ಏಕಾಏಕಿ ಅವರ ಕತ್ತು ಹಿಡಿದು ಎಳೆದಿದ್ದಾರೆ. ಆ ವೇಳೆ ಬೆಂಬಲಿಗರು ತಡೆದಿಲ್ಲವಾದರೆ ಹಲ್ಲೆಯನ್ನೇ ಮಾಡಿ ಬಿಡುತ್ತಿದ್ದರು ಎನ್ನಲಾಗಿದೆ.
ಇನ್ನು ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ನಾರಾಯಣಗೌಡ ಅವರು, ನಾನು ಇಂಜಿನಿಯರ್ ಮೇಲೆ ಹಲ್ಲೆ ನಡೆಸಿಲ್ಲ. ರೈತರ ಬೆಳೆಗಳಿಗೆ ನೀರು ಬಿಡದೇ ಇರುವಾಗ ರೈತರು ನನ್ನನ್ನು ಪ್ರಶ್ನಿಸಿದ್ದರು. ರೈತರ ಪರವಾಗಿ ಮಾತನಾಡಲು ನಾನು ಇಂಜಿನಿಯರ್ ಕಚೇರಿಗೆ ಹೋಗಿದ್ದೆ. ನೀವೇ ನನ್ನೊಂದಿಗೆ ಬನ್ನಿ, ರೈತರ ಕಷ್ಟ ನೋಡಿ ಎಂದು ನಾನು ಅವರನ್ನು ಕೈ ಹಿಡಿದು ನನ್ನೊಂದಿಗೆ ಕರೆತರಲು ಯತ್ನಿಸಿದ್ದೇನೆ ಅಷ್ಟೇ ಎಂದು ಸ್ಪಷ್ಟನೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಗೆಲುವು; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

SCROLL FOR NEXT