ರುದ್ರೇಶ್ 
ರಾಜ್ಯ

ಆರ್ ಎಸ್ ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣ: ರಾಜ್ಯಪಾಲರಿಗೆ ಬಿಜೆಪಿಯಿಂದ ದೂರು

: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ಬಿಜೆಪಿ ...

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು ಸಲ್ಲಿಸಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ರಾಜಭವನಕ್ಕೆ ಭೇಟಿ ನೀಡಿದ ಬಿಜೆಪಿ ನಿಯೋಗ, ರಾಜ್ಯಪಾಲ ವಜುಭಾಯಿ ವಾಲಾರನ್ನು ಭೇಟಿ ಮಾಡಿ ದೂರು ನೀಡಿತು. ರಾಜ್ಯದಲ್ಲಿ ಇತ್ತೀಚೆಗೆ ನಡೆದಿರುವ ಹತ್ಯೆ ಘಟನೆಗಳು, ಗಲಭೆಗಳ ಕುರಿತು ರಾಜ್ಯಪಾಲರಿಗೆ ಮಾಹಿತಿ ನೀಡಿತು.

ವಿಶೇಷವಾಗಿ ಆರ್‌ಎಸ್‌ಎಸ್ ಕಾರ್ಯಕರ್ತ ರುದ್ರೇಶ್ ಹತ್ಯೆ ಪ್ರಕರಣವನ್ನು ಪ್ರಸ್ತಾಪಿಸಿ ಆರೋಪಿಗಳನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ದೂರು ಸಲ್ಲಿಕೆ ಮಾಡಿದರು. ಕೂಡಲೇ ರುದ್ರೇಶ್ ಹಂತಕರ ಬಂಧನಕ್ಕೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಮನವಿ ಮಾಡಿದರು.

ಇನ್ನೂ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಬೇಕೆಂದು ಕೇಂದ್ರ ಗೃಹ ಸಚಿವ ರಾಜ್ ನಾಥ್ ಸಿಂಗ್ ಅವರಿಗೆ ಶಾಸಕ ಸಿ.ಟಿ ರವಿ ಪತ್ರ ಬರೆದಿದ್ದಾರೆ. ರಾಜ್ಯ ಪೊಲೀಸರು ಭಯದಿಂದಾಗಿ ರುದ್ರೇಶ್ ಹತ್ಯೆಗೆ ಕೌಟುಂಬಿಕ ಕಲಹ ಕರಾಣ ಎಂದು ಹೇಳುವ ಮೂಲಕ ಪ್ರಕರಣದ ದಿಕ್ಕು ತಪ್ಪಿಸಲು ಯತ್ನಿಸುತ್ತಿದ್ದಾರೆ. ಕೇಂದ್ರ ಗೃಹ ಇಲಾಖೆ ಕೆಲ ಇಸ್ಲಾಮಿಕ್ ಸಂಘಟನೆಗಳನ್ನು ನಿಷೇಧಿಸಿದ್ದರಿಂದ ಕುಪಿತಗೊಂಡವರು ಈ ರೀತಿ ಕೊಲೆಗಳನ್ನು ಮಾಡುತ್ತಿದ್ದಾರೆ ಎಂದು ಸಿ,ಟಿ ರವಿ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT