ರಾಜರಾಜೇಶ್ವರಿ ನಗರದಲ್ಲಿರುವ ಎಸ್ ಎಸ್ ಆಸ್ಪತ್ರೆ (ಸಂಗ್ರಹ ಚಿತ್ರ) 
ರಾಜ್ಯ

ಅಕ್ರಮ ಭೂ ಒತ್ತವರಿ; ಎಸ್ ಎಸ್ ಆಸ್ಪತ್ರೆಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್!

ಅಕ್ರಮ ಭೂ ಒತ್ತುವರಿ ಪ್ರಕರಣದಲ್ಲಿ ಸರ್ಕಾರದ ವಶಕ್ಕೆ ಹೋಗುವ ಭೀತಿ ಎದುರಿಸುತ್ತಿದ್ದ ಮಾಜಿ ಸಚಿವ ಶ್ಯಾಮನೂರು ಶಿವಶಂಕರಪ್ಪ ಅವರ ಮಾಲೀಕತ್ವದ ಎಸ್ ಎಸ್ ಆಸ್ಪತ್ರೆಗೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ.

ಬೆಂಗಳೂರು: ಅಕ್ರಮ ಭೂ ಒತ್ತುವರಿ ಪ್ರಕರಣದಲ್ಲಿ ಸರ್ಕಾರದ ವಶಕ್ಕೆ ಹೋಗುವ ಭೀತಿ ಎದುರಿಸುತ್ತಿದ್ದ ಮಾಜಿ ಸಚಿವ ಶ್ಯಾಮನೂರು ಶಿವಶಂಕರಪ್ಪ ಅವರ ಮಾಲೀಕತ್ವದ ಎಸ್ ಎಸ್ ಆಸ್ಪತ್ರೆಗೆ  ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ.

ಮೂಲಗಳ ಪ್ರಕಾರ ಎಸ್ ಎಸ್ ಆಸ್ಪತ್ರೆಯನ್ನು ಸರ್ಕಾರದ ವಶಕ್ಕೆ ಪಡೆಯುವ ಜಿಲ್ಲಾಡಳಿತದ ನಿರ್ಧಾರಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದ್ದು, ಆಸ್ಪತ್ರೆಯ ಸಂಪೂರ್ಣ ದಾಖಲೆಗಳನ್ನು ಸಕ್ಷಮ  ಪ್ರಾಧಿಕಾರದ ಮುಂದೆ ಸಲ್ಲಿಸುವಂತೆ ಸೂಚಿಸಿದೆ. ಅಲ್ಲದೆ ಸಕ್ಷಣ ಪ್ರಾಧಿಕಾರ ದಾಖಲೆ ಪರಿಶೀಲಿಸಿ ವರದಿ ಬಂದ ಬಳಿಕ ವರದಿಯನ್ನಾಧರಿಸಿ ಮುಂದಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದೆ  ಎಂದು ತಿಳಿದುಬಂದಿದೆ.

ರಾಜರಾಜೇಶ್ವರಿ ನಗರದಲ್ಲಿರುವ ಎಸ್ ಎಸ್ ಆಸ್ಪತ್ರೆ ಸರ್ಕಾರಿ ಖರಾಬು ಭೂಮಿಯಲ್ಲಿದ್ದು, ಅದನ್ನು ಕೆಡವದೇ ಸರ್ಕಾರದ ವಶಕ್ಕೆ ಪಡೆಯಲು ಈ ಹಿಂದೆ ಬೆಂಗಳೂರು ಜಿಲ್ಲಾಡಳಿತ ನಿರ್ಧರಿಸಿತ್ತು.  ಈ ಸಂಬಂಧ ಎಸ್ ಎಸ್ ಆಸ್ಪತ್ರೆ ಆಡಳಿತ ಮಂಡಳಿಗೂ ಜಿಲ್ಲಾಡಳಿತ ನೋಟಿಸ್ ಜಾರಿ ಮಾಡಿತ್ತು. ಆದರೆ ಜಿಲ್ಲಾಡಳಿತದ ನೋಟಿಸ್ ಪ್ರಶ್ನಿಸಿ  ಆಸ್ಪತ್ರೆ ಆಡಳಿತ ಮಂಡಳಿ ಹೈಕೋರ್ಟ್ ನಲ್ಲಿ  ಅರ್ಜಿ ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್ ಅಬ್ದುಲ್ ನಜೀರ್ ಅವರು, ಆಸ್ಪತ್ರೆಗೆ ಸಂಬಂಧಿಸಿದ ದಾಖಲೆಗಳನ್ನು ಸಕ್ಷಮ ಪ್ರಾಧಿಕಾರದ ಮುಂದೆ ಸಲ್ಲಿಸಿ ತಹಶೀಲ್ದಾರ್  ಪರಿಶೀಲನೆ ನಡೆಸುವಂತೆಯೂ ಮತ್ತು ಪ್ರಾಧಿಕಾರದ ವರದಿ ಬಂದ ಬಳಿಕ ಕಾನೂನಿನ್ವಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

ಬಡವರಿಗಿಲ್ಲದ ಅವಕಾಶ ಪ್ರಭಾವಿಗಳಿಗೇಕೆ: ಮನೆ ಕಳೆದುಕೊಂಡ ನಿವಾಸಿಗಳ ಆಕ್ರೋಶ
ಇನ್ನು ಎಸ್ ಎಸ್ ಆಸ್ಪತ್ರೆ ಹಾಗೂ ದರ್ಶನ್ ನಿವಾಸ ಸೇರಿದಂತೆ 69 ನಿವಾಸಗಳನ್ನು ಕೆಡವದೇ ಇರುವ ಕುರಿತು ನಿರ್ಧಾರ ಕೈಗೊಂಡ ಜಿಲ್ಲಾಡಳಿತದ ವಿರುದ್ಧ ಸ್ಥಳೀಯ ನಿವಾಸಿಗಳು ಆಕ್ರೋಶ  ವ್ಯಕ್ತಪಡಿಸುತ್ತಿದ್ದು, ಪ್ರಭಾವಿಗಳ ಮನೆ ಒಡೆಯಲು ಮೀನಾಮೇಷ ಎಣಿಸುತ್ತಿರುವ ಸರ್ಕಾರ ಯಾವುದೇ ರೀತಿ ಮುನ್ಸೂಚನೆ ನೀಡದೇ ಬಡವರ ಮನೆ ಒಡೆದ ಕುರಿತ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ.  ಪ್ರಭಾವಿಗಳಿಗಿರುವ ಅವಕಾಶ ನಮಗೇಕಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT