ದರ್ಶನ್ ಮನೆ 
ರಾಜ್ಯ

ಸಾಂಕೇತಿಕವಾಗಿ ನಟ ದರ್ಶನ ಮನೆ ವಶಕ್ಕೆ ಪಡೆದ ಜಿಲ್ಲಾಡಳಿತ

ರಾಜಕಾಲುವೆ ಒತ್ತುವರಿ ಜಾಗದಲ್ಲಿ ನಿರ್ಮಾಣವಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮನೆಯನ್ನು ಶನಿವಾರ ಸಾಂಕೇತಿಕವಾಗಿ...

ಬೆಂಗಳೂರು: ರಾಜಕಾಲುವೆ ಒತ್ತುವರಿ ಜಾಗದಲ್ಲಿ ನಿರ್ಮಾಣವಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮನೆಯನ್ನು ಶನಿವಾರ ಸಾಂಕೇತಿಕವಾಗಿ ಸರ್ಕಾರದ ವಶಕ್ಕೆ ಪಡೆಯಲಾಗಿದೆ.
ರಾಜರಾಜೇಶ್ವರಿ ನಗರದ ಐಡಿಯಲ್ ಹೋಮ್ಸ್ ಬಡಾವಣೆಯಲ್ಲಿರುವ ದರ್ಶನ್ ಮನೆ ಸೇರಿದಂತೆ ಒತ್ತುವರಿ ಆಗಿರುವ ಜಾಗಗಳನ್ನು ವಶಕ್ಕೆ ಪಡೆಯುವ ಪ್ರಕ್ರಿಯೆ ಜಿಲ್ಲಾಡಳಿತ ಇಂದು ಅರಂಭಿಸಿದ್ದು, ದರ್ಶನ್ ಮನೆಯ ಗೋಡೆಯ ಮೇಲೆ ಇದು ಸರ್ಕಾರಿ ಜಾಗ ಎಂದು ಬರೆಯುವ ಮೂಲಕ ಸಾಂಕೇತಿಕವಾಗಿ ವಶಕ್ಕೆ ಪಡೆಯಲಾಗಿದೆ.
ತಹಶೀಲ್ದಾರ್ ಶಿವಕುಮಾರ್ ಅವರು ನೇತೃತ್ವ ಈ ಕಾರ್ಯಾಚರಣೆ ನಡೆಯುತ್ತಿದ್ದು, ದರ್ಶನ್ ಮನೆಯ ಬಳಿ ಹೆಚ್ಚಿನ ಸಂಖ್ಯೆಯ ಪೊಲೀಸರನ್ನು ನಿಯೋಜಿಸಲಾಗಿದೆ. ಕೆಲವರು ಮಾಧ್ಯಮದವರಿಗೆ ಫೋಟೋ ತೆಗೆಯದಂತೆ, ವಿಡಿಯೋ ಮಾಡದಂತೆ ತಡೆ ಒಡ್ಡುತ್ತಿದ್ದಾರೆ.
ಇನ್ನು ಮಾಜಿ ಸಚಿವ ಶಾಮನೂರು ಶಿವಶಂಕಪ್ಪ ಅವರ ಒಡೆತನದ ಎಸ್ ಎಸ್ ಆಸ್ಪತ್ರೆ ಪಕ್ಕದ ಖಾಲಿ ಜಾಗದಲ್ಲಿ ಸರ್ಕಾರಿ ಸ್ವತ್ತು ಎಂದು ನಾಮಫಲಕ ಅಳವಡಿಸುವ ಕಾರ್ಯ ನಡೆದಿದೆ.
ನಟ ದರ್ಶನ್ ಅವರು ಒಟ್ಟು 2,100 ಚ. ಅಡಿ ರಾಜ ಕಾಲುವೆ ಒತ್ತುವರಿ ಮಾಡಿದ್ದು, ಶಾಮನೂರು ಶಿವಶಂಕರಪ್ಪ ಅವರ ಆಸ್ಪತ್ರೆ ಸಂಪೂರ್ಣ ಒತ್ತುವರಿ ಜಾಗದಲ್ಲಿರುವುದು ದೃಢಪಟ್ಟಿದೆ.
ಕಳೆದ ವಾರ ಮುಂದಿನ ಏಳು ದಿನಗಳಲ್ಲಿ ಒತ್ತುವರಿ ಜಾಗವನ್ನು ತೆರವುಗೊಳಿಸುವಂತೆ ಇಬ್ಬರಿಗೂ ಅಂತಿಮ ನೋಟಿಸ್ ನೀಡಲಾಗಿದ್ದು, ಒಂದು ವೇಳೆ ತೆರವುಗೊಳಿಸದಿದ್ದೆರೆ ತಾವೇ ತೆರವು ಕಾರ್ಯಾಚರಣೆ ನಡೆಸುವುದಾಗಿ ಬೆಂಗಳೂರು ನಗರ ಜಿಲ್ಲಾಧಿಕಾರಿ ವಿ ಶಂಕರ್ ಅವರು ಎಚ್ಚರಿಕೆ ನೀಡಿದ್ದರು. ಆದರೂ ಮನೆ ಹಾಗೂ ಆಸ್ಪತ್ರೆ ತೆರವುಗೊಳಿಸದ ಹಿನ್ನೆಲೆಯಲ್ಲಿ ಇಂದು ವಶಕ್ಕೆ ಪಡೆಯಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT