ಯುವತಿ ಕಡೆಯವರಿಂದ ಹಲ್ಲೆಗೊಳಗಾದ ತಂದೆ-ಮಗ 
ರಾಜ್ಯ

ಯುವತಿಗೆ ಪ್ರೀತಿಸಬೇಡ ಎಂದಿದ್ದೇ ತಂದೆ-ಮಗನ ಮೇಲೆ ಮಾರಣಾಂತಿಕ ಹಲ್ಲೆಗೆ ಕಾರಣವಾಯ್ತೆ?

ಯುವತಿಯೊರ್ವಳಿಗೆ ಪ್ರೀತಿಸಬೇಡ ಎಂದು ಹೇಳಿದ್ದೆ ತಂದೆ-ಮಗನ ಮೇಲಿನ ಮಾರಣಾಂತಿಕ ಹಲ್ಲೆಗೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ...

ಮೈಸೂರು: ಯುವತಿಯೊರ್ವಳಿಗೆ ಪ್ರೀತಿಸಬೇಡ ಎಂದು ಹೇಳಿದ್ದೆ ತಂದೆ-ಮಗನ ಮೇಲಿನ ಮಾರಣಾಂತಿಕ ಹಲ್ಲೆಗೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ. 
ಮೈಸೂರಿನ ಎನ್ ಆರ್ ಮೊಹಲ್ಲಾದ ಮುಕ್ತಾರ್ ಹಾಗೂ ಅವರ ಮಗ ಮೊಹಿನ್ ಅಹಮದ್ ಮೇಲೆ ಭಾನುವಾರ ರಾತ್ರಿ ನಾಲ್ವರು ಅಪರಿಚಿತರು ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಪರಾರಿಯಾಗಿದ್ದರು. 
ಇದೀಗ ಈ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಮೋಹಿನ್ ಪತ್ನಿ ತಮ್ಮ ಸಿರಾಜ್ ಓರ್ವ ಯುವತಿಯನ್ನು ಪ್ರೀತಿಸುತ್ತಿದ್ದ. ಇದು ಮನೆಯಲ್ಲಿ ಸದಾ ಜಗಳಕ್ಕೆ ಕಾರಣವಾಗಿತ್ತು. ಈಗಾಗಿ ಮೋಹಿನ್ ಆ ಯುವತಿಗೆ ಫೋನ್ ಮಾಡಿ ತನ್ನ ಭಾವಮೈದನನ್ನು ಪ್ರೀತಿಸದಂತೆ ಹೇಳಿದ್ದಾನೆ. 
ಮೋಹಿನ್ ಮಾತಿನಿಂದ ಕೋಪಗೊಂಡ ಯುವತಿ ತನ್ನ ಕಡೆಯವರಿಗೆ ಹೇಳಿ ಹಲ್ಲೆ ಮಾಡಿಸಿದ್ದಾಳೆ ಎಂದು ಮೋಹಿ ಸಂಬಂಧಿಕರು ಆರೋಪಿಸಿದ್ದಾರೆ. ಆದರೆ ಇಲ್ಲಿಯವರೆಗೂ ಯುವತಿ ವಿರುದ್ಧ ಯಾವುದೇ ಪ್ರಕರಣ ದಾಖಲಾಗಿಲ್ಲ. 
ದುಷ್ಕರ್ಮಿಗಳಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿದ್ದ ಮೋಹಿನ್ ಪರಿಸ್ಥಿತಿ ಗಂಭೀರವಾಗಿದ್ದು, ತಂದೆ ಮುಕ್ತಾರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT