ತಾಮ್ರ ಶಾಸನ 
ರಾಜ್ಯ

ಶಿವಮೊಗ್ಗ: 17ನೇ ಶತಮಾನದ ಕೆಳದಿ ಶಿವಪ್ಪ ನಾಯಕನ ತಾಮ್ರ ಶಾಸನ ಪತ್ತೆ

17 ನೇ ಶತಮಾನದ ಕೆಳದಿ ಶಿವಪ್ಪನಾಯಕನಿಗೆ ಸೇರಿದ ಅಪರೂಪದ ತಾಮ್ರ ಶಾಸನವೊಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಪತ್ತೆಯಾಗಿದೆ..,.

ಶಿವಮೊಗ್ಗ: 17 ನೇ ಶತಮಾನದ ಕೆಳದಿ ಶಿವಪ್ಪನಾಯಕನಿಗೆ ಸೇರಿದ ಅಪರೂಪದ ತಾಮ್ರ ಶಾಸನವೊಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಪತ್ತೆಯಾಗಿದೆ.

ಸಾಗರ ತಾಲೂಕಿನ ಆನಂದಪುರಂ ಗ್ರಾಮದ ಬಳಿಯ ಯಡಹಳ್ಳಿ ಬಳಿ ಈ ಶಾಸನ ಪತ್ತೆಯಾಗಿದೆ. 6.5 ಇಂಚು ಅಗಲ, 10 ಇಂಚು ಉದ್ದ. 0.5 ಮಿಮಿ ದಪ್ಪ ಇರುವ ಶಾಸನ ಇದಾಗಿದೆ. ಶಾಸನವದ ಮುಂಭಾಗದಲ್ಲಿ 33 ಸಾಲು ಹಾಗೂ ಶಾಸನದ ಹಿಂಭಾಗದಲ್ಲಿ 17 ಸಾಲುಗಳಲ್ಲಿ ಬರೆಯಲಾಗಿದೆ.

ಕೆಳದಿ ಸಂಸ್ಥಾನಕ್ಕೆ ಸೇರಿದ ಶಾಸನ ಇದಾಗಿದ್ದು, ವೀರಭದ್ರ ನಾಯಕ,  ಆತನ ಮೊಮ್ಮಗ ವೆಂಕಟಪ್ಪ ನಾಯಕ ಮತ್ತು ಆತನ ಮಗ ಭದ್ರಪ್ಪ ನಾಯಕನ ಆಡಳಿತದ ಬಗ್ಗೆ ಈ ಶಾಸನದಲ್ಲಿ ಉಲ್ಲೇಖಿಸಲಾಗಿದೆ.

1632 ರಲ್ಲಿ ವೀರಭದ್ರ ನಾಯಕ ಹರತಾಳ ಪ್ರದೇಶದಲ್ಲಿರುವ ಆನಂದಪುರದ ಸಿದ್ದಲಿಂಗ ದೇವರು ಮತ್ತು ಉತ್ತರಾದಿ ದೇವರುಗಳಿಗೆ ಭೂಮಿಯನ್ನು ಶ್ರಾವಣ ತಿಂಗಳಿನ 15 ನೇ ದಿನ ದಾನವಾಗಿ ನೀಡಿದ್ದರು ಎಂದು ಶಾಸನದಲ್ಲಿ ಉಲ್ಲೇಖಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT