ಸಿದ್ದರಾಮಯ್ಯ 
ರಾಜ್ಯ

ಖುಲಾಸೆಗೊಂಡ ಮಾತ್ರಕ್ಕೆ ಯಡಿಯೂರಪ್ಪ ನಿರಪರಾಧಿ ಅಲ್ಲ: ಸಿಎಂ ಸಿದ್ದರಾಮಯ್ಯ

ಯಡಿಯೂರಪ್ಪ ಅವರನ್ನು ಸಿಬಿಐ ವಿಶೇಷ ನ್ಯಾಯಾಲಯ ಖುಲಾಸೆಗೊಳಿಸಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ಖುಲಾಸೆಗೊಂಡ ಮಾತ್ರಕ್ಕೆ ಯಡಿಯೂರಪ್ಪ ತಪ್ಪು ಮಾಡಿಲ್ಲ ಎಂದಲ್ಲ...

ನವದೆಹಲಿ: ಮೈನಿಂಗ್ ಕಂಪನಿಗೆ ಪರವಾನಗಿ ನೀಡಲು ಕಿಕ್ ಬ್ಯಾಕ್ ಪಡೆದ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಸಿಬಿಐ ವಿಶೇಷ ನ್ಯಾಯಾಲಯ ಖುಲಾಸೆಗೊಳಿಸಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ಖುಲಾಸೆಗೊಂಡ ಮಾತ್ರಕ್ಕೆ ಯಡಿಯೂರಪ್ಪ ತಪ್ಪು ಮಾಡಿಲ್ಲ ಎಂದಲ್ಲ ಎಂದು ಹೇಳಿದ್ದಾರೆ.

ಪ್ರಕರಣದಲ್ಲಿ ಸಾಕ್ಷ್ಯಾಧಾರ ಕೊರತೆಯಿಂದ ಯಡಿಯೂರಪ್ಪ ಅವರನ್ನು ಖುಲಾಸೆಗೊಳಿಸಲಾಗಿದೆ. ಖುಲಾಸೆಗೊಂಡ ಮಾತ್ರಕ್ಕೆ ಯಡಿಯೂರಪ್ಪ ತಪ್ಪೇ ಮಾಡಿಲ್ಲ ಎಂದಲ್ಲ. ಕೊಲೆ ಪ್ರಕರಣದಲ್ಲಿ ಸಾಕ್ಷ್ಯಾಧಾರ ಕೊರತೆಯಿಂದ ಖುಲಾಸೆಗೊಂಡರೆ ಕೊಲೆಯೇ ನಡೆದಿಲ್ಲ ಎನ್ನಲಾಗುತ್ತದೆಯೇ? ಎಂದಿರುವ ಸಿಎಂ ಕಿಕ್ ಬ್ಯಾಕ್ ಪ್ರಕರಣದಲ್ಲೂ ಯಡಿಯೂರಪ್ಪ ಅವರನ್ನು ಖುಲಾಸೆ ಮಾಡಿದ ಮಾತ್ರಕ್ಕೆ ಅವರು ತಪ್ಪು ಮಾಡಿಲ್ಲ ಎನ್ನಲು ಸಾಧ್ಯವಿಲ್ಲ ಎಂದಿದ್ದಾರೆ.

ಇನ್ನು ಮುಂದಿನ ಚುನಾವಣೆಯಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಅಭಿಪ್ರಾಯ ಕೇಳಿಬರುತ್ತಿರುವ ಬಗ್ಗೆಯೂ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ಮುಂದಿನ ಸಿಎಂ ಯಾರಾಗಲಿದ್ದಾರೆ ಎಂಬುದನ್ನು ರಾಜ್ಯದ ಜನ ನಿರ್ಧರಿಸುತ್ತಾರೆಯೇ ಹೊರತು ಬಿಜೆಪಿ ಅಥವಾ ಯಡಿಯೂರಪ್ಪ ಅಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT