ವಿಕಾಸ ಸೌಧದಲ್ಲಿ ನಡೆಸಿದ ಸಭೆಯಲ್ಲಿ ಕೆ.ಜೆ ಜಾರ್ಜ್ 
ರಾಜ್ಯ

1.3 ಕೋಟಿ ಜನರ ತೀರ್ಮಾನವನ್ನು ಒಂದೂವರೆ ಸಾವಿರ ಮಂದಿ ನಿರ್ಧರಿಸಲಾರರು: ಜಾರ್ಜ್

ಸಾವಿರಾರು ಮಂದಿ ಉಕ್ಕಿನ ಸೇತುವೆ ನಿರ್ಮಾಣಕ್ಕೆ ವಿರೋಧ ವ್ಯಕ್ತ ಪಡಿಸುತ್ತಿದ್ದರು ಅದನ್ನು ಮಾಡಿಯೇ ತೀರುತ್ತೇನೆ ಎಂದು ಸರ್ಕಾರ ಶಪಥ ಮಾಡಿದೆ. ...

ಬೆಂಗಳೂರು: ಸಾವಿರಾರು ಮಂದಿ ಉಕ್ಕಿನ ಸೇತುವೆ ನಿರ್ಮಾಣಕ್ಕೆ ವಿರೋಧ ವ್ಯಕ್ತ ಪಡಿಸುತ್ತಿದ್ದರು ಅದನ್ನು ಮಾಡಿಯೇ ತೀರುತ್ತೇನೆ ಎಂದು ಸರ್ಕಾರ ಶಪಥ ಮಾಡಿದೆ. ಬಸವೇಶ್ವರ ವೃತ್ತದಿಂದ ಹೆಬ್ಬಾಳದವರೆಗೂ ನಿರ್ಮಾಣ ಮಾಡಲು ಹೊರಟಿರುವ ಉಕ್ಕಿನ ಸೇತುವೆಗೆ ಕೇವಲ 1.500 ಮಂದಿ ವಿರೋಧ ವ್ಯಕ್ತ ಪಡಿಸಿದ್ದಾರೆ. ಈ ಪ್ರತಿಭಟನಾಕಾರರು ಬೆಂಗಳೂರು ನಗರದಲ್ಲಿರುವ 1.3 ಕೋಟಿ ಜನರನ್ನು ಪ್ರತಿನಿಧಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

ವಿಕಾಸಸೌಧದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಶಾಸಕರ ಜತೆ ಸಭೆ ನಡೆಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ ಜಾರ್ಜ್, ಉಕ್ಕಿನ ಸೇತುವೆ ವಿವಾದ ಕೇವಲ ಜನರಿಂದ ಹಾಗೂ ಮಾಧ್ಯಮಗಳಿಂದ ನಿರ್ಧಾರವಾಗುವುದಿಲ್ಲ. ನಾವು ರಾಜ್ಯ ಸರ್ಕಾರ, ಅಂದರೆ ಜನರಿಂದ ಆರಿಸಿ ಬಂದವರು, ನಮಗೆ ಯಾವುದೇ ಒಳ್ಳೆಯ ನಿರ್ಧಾರ ತೆಗೆದುಕೊಳ್ಳುವ ಹಕ್ಕಿಲ್ಲವೇ ಎಂದು ಪ್ರಶ್ನಿಸಿದರು. ಉಕ್ಕಿನ ಸೇತುವೆ ನಿರ್ಮಾಣ ಮಾಡಲು ತೀರ್ಮಾನ ಕೈಗೊಂಡಿದ್ದೇವೆ, ಅದನ್ನು ಮಾಡಿಯೇ ತೀರುತ್ತೇವೆ, ಅದರಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಜಾರ್ಜ್ ತಿಳಿಸಿದ್ದಾರೆ.

ಯೋಜನೆ ವಿರೋಧಿಸುವವರು ಯಾವುದೇ ಸಮಯದಲ್ಲಿ ಬಂದು ನನ್ನನ್ನು ಭೇಟಿ ಮಾಡಲಿ, ಯೋಜನೆ ಬಗ್ಗೆ ವಿಸ್ತಾರವಾಗಿ ವಿವರಣೆ ನೀಡುತ್ತೇನೆ. ಇದವರೆಗೂ ಯೋಜನೆ ವಿರೋಧಿಸುವವರು ಯಾರೋಬ್ಬರು ನನ್ನನ್ನು ಭೇಟಿಯಾಗಿಲ್ಲ ಎಂದು ಹೇಳಿದ್ದಾರೆ.

ಇನ್ನೂ 812 ಮರಗಳನ್ನು ಕತ್ತರಿಸುವ ಬಗ್ಗೆ ಯಾವುದೇ ಭರವಸೆ ನೀಡದ ಜಾರ್ಜ್ ಮುಂದೆ ಗಿಡಗಳನ್ನು  ನೆಡುತ್ತೇವೆ ಎಂದಷ್ಟೇ ಉತ್ತರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT