ಹೆಚ್ಚಿದ ಜಾಗೃತಿ ಪ್ರಜ್ಞೆ, ತಗ್ಗಿದ ಪಟಾಕಿ ಅವಗಢ! 
ರಾಜ್ಯ

ಹೆಚ್ಚಿದ ಜಾಗೃತಿ ಪ್ರಜ್ಞೆ, ತಗ್ಗಿದ ಪಟಾಕಿ ಅವಗಢ!

ದೇಶಾದ್ಯಂತ ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದ್ದು, ಎಂದಿಗಿಂತ ಈ ವರ್ಷ ಪಟಾಕಿ ಅವಗಢಗಳ ಸಂಖ್ಯೆ ಕಡಿಮೆಯಾಗಿದೆ.

ನವದೆಹಲಿ: ದೇಶಾದ್ಯಂತ ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದ್ದು, ಎಂದಿಗಿಂತ ಈ ವರ್ಷ ಪಟಾಕಿ ಅವಗಢಗಳ ಸಂಖ್ಯೆ ಕಡಿಮೆಯಾಗಿದೆ. ದೆಹಲಿಯಲ್ಲಿ 100 ಸಣ್ಣ ಪಟಾಕಿ ಅವಗಢಗಳು ಸಂಭವಿಸಿದ್ದು, ಗಂಭೀರವಾಗಿ ಗಾಯಗೊಂಡವರ, ಹಾನಿಗೊಳಗಾದವರ ಸಂಖ್ಯೆ ಕಡಿಮೆ ಆಗಿದೆ.  

ದೆಹಲಿ ಫೈರ್ ಸರ್ವಿಸ್ ನ ಅಧಿಕಾರಿಗಳು ಈ ಬಗ್ಗೆ ಮಾಹಿತಿ ನೀಡಿದ್ದು, ಈ ವರೆಗೂ 100 ಸಣ್ಣ ಅವಗಢಗಳು ಸಂಭವಿಸಿವೆ. ಆದರೆ ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂದು ತಿಳಿಸಿದ್ದಾರೆ. ಮುಂಜಾಗೃತಾ ಕ್ರಮವಾಗಿ 1,500 ಫೈರ್ ಫೈಟರ್ ಗಳನ್ನು ಸಿದ್ಧಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ವರ್ಷ ದೀಪಾವಳಿ ಸಂದರ್ಭದಲ್ಲಿ ದೆಹಲಿಯಲ್ಲಿ 290 ಪಟಾಕಿ ಅವಗಢಗಳು ಸಂಭವಿಸಿದ್ದವು. ಗಂಭೀರವಾಗಿ ಗಾಯಗೊಂಡ 500 ಪ್ರಕರಣಗಳು ವರದಿಯಾಗಿದ್ದವು. ಈ ವರ್ಷ ಅವಗಢದ ಸಂಖ್ಯೆ 100 ಕ್ಕೆ ಇಳಿದಿದೆ.

ಬೆಂಗಳೂರಿನಲ್ಲೂ ಪಟಾಕಿ ಅವಗಢದ ಸಂಖ್ಯೆ ಇಳಿಕೆ!

ಇನ್ನು ಬೆಂಗಳೂರಿನಲ್ಲೂ ಸಹ ಪಟಾಕಿ ಅವಗಢದ ಸಂಖ್ಯೆ ಇಳಿಕೆಯಾಗಿದ್ದು, ಈ ವರೆಗೂ ಕೇವಲ 40 ಪಟಾಕಿ ಅವಗಢಗಳ ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರು ನೇತ್ರಾಲಯದಲ್ಲಿ 6 ಜನ, ಮಿಂಟೋ ಆಸ್ಪತ್ರೆಯಲ್ಲಿ 4, ನಾರಾಯಣ ನೇತ್ರಾಲಯದಲ್ಲಿ 9 ಜನರು ಚಿಕಿತ್ಸೆ ಪಡೆಯುತ್ತಿದ್ದು ಕಳೆದ ವರ್ಷಕ್ಕೆ ಹೋಲಿಸಿದರೆ ಪಟಾಕಿ ಅವಗಢಗಳು ಶೇ.70 ರಷ್ಟು ಕಡಿಮೆಯಾಗಿವೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT