ಉಕ್ಕಿನ ಸೇತುವೆ ಅತ್ಯಂತ ಪಾರದರ್ಶಕ ಯೋಜನೆ: ಸಿಎಂ ಸಿದ್ದರಾಮಯ್ಯ 
ರಾಜ್ಯ

ಉಕ್ಕಿನ ಸೇತುವೆ ಅತ್ಯಂತ ಪಾರದರ್ಶಕ ಯೋಜನೆ: ಸಿಎಂ ಸಿದ್ದರಾಮಯ್ಯ

ವಿರೋಧದ ನಡುವೆಯೂ ಉಕ್ಕಿನ ಸೇತುವೆ ನಿರ್ಮಾಣ ಮಾಡಲು ಹೊರಟಿರುವ ಸಿಎಂ ಸಿದ್ದರಾಮಯ್ಯ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡಿದ್ದು ಸ್ಟೀಲ್ ಫ್ಲೈ ಓವರ್ ಅತ್ಯಂತ ಪಾರದರ್ಶಕ ಯೋಜನೆ ಎಂದು ಹೇಳಿದ್ದಾರೆ.

ಮಂಗಳೂರು: ವಿರೋಧದ ನಡುವೆಯೂ ಉಕ್ಕಿನ ಸೇತುವೆ ನಿರ್ಮಾಣ ಮಾಡಲು ಹೊರಟಿರುವ ಸಿಎಂ ಸಿದ್ದರಾಮಯ್ಯ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡಿದ್ದು ಸ್ಟೀಲ್ ಫ್ಲೈ ಓವರ್ ಅತ್ಯಂತ ಪಾರದರ್ಶಕ ಯೋಜನೆ ಎಂದು ಹೇಳಿದ್ದಾರೆ.

ಸ್ಟೀಲ್ ಫ್ಲೈ ಓವರ್ ಬಗ್ಗೆ ವಿರೋಧ ಪಕ್ಷ ಬಿಜೆಪಿ ಆಧಾರ ರಹಿತ, ರಾಜಕೀಯ ಪ್ರೇರಿತ ಆರೋಪಗಳನ್ನು ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಉಕ್ಕಿನ ಸೇತುವೆ ಯೋಜನೆಯನ್ನು ವಿರೋಧಿಸಿದ್ದ ಕೇಂದ್ರ ಸಚಿವ ಸದಾನಂದ ಗೌಡ, ಟ್ರಾಫಿಕ್ ಸಮಸ್ಯೆಯನ್ನು ಬಗೆಹರಿಸುವ ಹೆಸರಿನಲ್ಲಿ ಸರ್ಕಾರ ಹಣಕಾಸಿನ ವ್ಯವಹಾರದಲ್ಲಿ ಮೋಸಮಾಡುತ್ತಿದೆ ಎಂದು ಆರೋಪಿಸಿ, ಯೋಜನೆಯ ಜಾರಿಯಲ್ಲಿ ಸರ್ಕಾರ ಪಾರದರ್ಶಕತೆಯನ್ನು ಪ್ರಶ್ನಿಸಿದ್ದರು. ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಅವರ ಆರೋಪಗಳನ್ನು ತಳ್ಳಿಹಾಕಿರುವ ಸಿಎಂ ಸಿದ್ದರಾಮಯ್ಯ, ಸುಳ್ಳು ಆರೋಪ ಮಾಡುವುದು ವಿಪಕ್ಷ ಬಿಜೆಪಿಯ ಎಂದಿನ ಕೆಲಸವಾಗಿದ್ದು ಸುಳ್ಳನ್ನು 100 ಬಾರಿ ಹೇಳುವ ಮೂಲಕ ಅದನ್ನೇ ನಿಜ ಮಾಡಲು ಹೊರಟಿದೆ ಸಿದ್ದರಾಮಯ್ಯ ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT