ಕೇವಲ 7 ನಿಮಿಷದಲ್ಲಿ ಉದ್ಯಮಿಯ ಪ್ರಾಣ ಉಳಿಸಿದ ಬೆಂಗಳೂರು ಪೊಲೀಸ್ 
ರಾಜ್ಯ

ಕೇವಲ 7 ನಿಮಿಷದಲ್ಲಿ ಉದ್ಯಮಿಯ ಪ್ರಾಣ ಉಳಿಸಿದ ಬೆಂಗಳೂರು ಪೊಲೀಸ್

ದುಷ್ಕರ್ಮಿಗಳ ದಾಳಿಗೆ ಒಳಗಾಗಿ ಸಂಕಷ್ಟದಲ್ಲಿದ್ದ ಉದ್ಯಮಿಯೊಬ್ಬರನ್ನು ಕೇವಲ 7 ನಿಮಿಷದಲ್ಲಿಯೇ ಬೆಂಗಳೂರು ಪೊಲೀಸರು ರಕ್ಷಣೆ ಮಾಡಿದ್ದಾರೆ...

ಬೆಂಗಳೂರು: ದುಷ್ಕರ್ಮಿಗಳ ದಾಳಿಗೆ ಒಳಗಾಗಿ ಸಂಕಷ್ಟದಲ್ಲಿದ್ದ ಉದ್ಯಮಿಯೊಬ್ಬರನ್ನು ಕೇವಲ 7 ನಿಮಿಷದಲ್ಲಿಯೇ ಬೆಂಗಳೂರು ಪೊಲೀಸರು ರಕ್ಷಣೆ ಮಾಡಿದ್ದಾರೆ.

ಶುಕ್ರವಾರ ಸಂಜೆ ಬಾಲಾಜಿ ಮೋಹನ್ ಎಂಬ ಉದ್ಯಮಿಯೊಬ್ಬರು ಬಾಣಸವಾಡಿಯಲ್ಲಿರುವ ತಮ್ಮ ನಿವಾಸಕ್ಕೆ ತೆರಳುತ್ತಿದ್ದ ವೇಳೆ ದುಷ್ಕರ್ಮಿಗಳ ಗುಂಪೊಂದು ದಾಳಿ ಮಾಡಿದೆ. ಕೂಡಲೇ ಬಾಲಾಜಿಯವರು ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.

ಮಾಹಿತಿ ನೀಡಿದ ಕೇವಲ 7 ನಿಮಿಷದಲ್ಲಿಯೇ ಬಾಣಸವಾಡಿ ಠಾಣೆಯ ಪೇದೆಗಳಾದ ಪೊನ್ನಣ್ಣ ಹಾಗೂ ಜಹೀದ್ ಎಂಬುವವರು ಸ್ಥಳಕ್ಕೆ ಬಂದು ಉದ್ಯಮಿಯನ್ನು ರಕ್ಷಣೆ ಮಾಡಿದ್ದಾರೆ.

ಕರ್ತವ್ಯ ಮೆರೆದ ಪೊಲೀಸರನ್ನು ಸಾಮಾಜಿಕ ಜಾಲತಾಣದಲ್ಲಿ ಕೊಂಡಾಡಿರುವ ಬಾಲಾಜಿಯವರು, ಇಬ್ಬರೂ ಪೇದೆಗಳ ಫೋಟೋವನ್ನು ತಮ್ಮ ಫೇಸ್ ಬುಕ್ ನಲ್ಲಿ ಹಾಕಿ, ಶೀಘ್ರಗತಿಯಲ್ಲಿ ಪ್ರತಿಕ್ರಿಯೆ ನೀಡಿ, ಕರ್ತವ್ಯ ಮೆರೆದ ಈ ಇಬ್ಬರೂ ಪೊಲೀಸರನ್ನು ಬೆನ್ನುತಟ್ಟಬೇಕಿದೆ. ನ್ಯೂಯಾರ್ಕ್ ನಗರ ಪೊಲೀಸ್ ಇಲಾಖೆಗಿಂತ ಬೆಂಗಳೂರು ಪೊಲೀಸರು ಕಡಿಮೆಯಿಲ್ಲ ಎಂದು ಹೇಳಿಕೊಂಡಿದ್ದಾರೆ.

ಬಾಲಾಜಿಯವರು ಹಾಕಿರುವ ಈ ಪೋಸ್ಟ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಬೆಂಗಳೂರು ನಗರ ಪೊಲೀಸರ ಕುರಿತು ಹೊಗಳಿಕೆ ಮಹಾಪೂರವೇ ಹರಿದು ಬರುತ್ತಿದೆ.

ಈ ಬಗ್ಗೆ ಹೆಚ್ಚುವರಿ ಪೊಲೀಸ್ ಆಯುಕ್ತರು ಟ್ವೀಟ್ ಮಾಡಿದ್ದು, ಈ ರೀತಿಯ ಪ್ರತಿಕ್ರಿಯೆಗಳು ನಮ್ಮ ಪ್ರಯತ್ನಗಳು ಹಾಗೂ ಕಾರ್ಯಗಳನ್ನು ಮತ್ತಷ್ಟು ಹೆಚ್ಚುವಂತೆ ಮಾಡುತ್ತದೆ ಎಂದು ಹೇಳಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT