ಶಾಸಕ ಮುನಿರತ್ನ 
ರಾಜ್ಯ

ಶಾಸಕ ಮುನಿರತ್ನ ಹೇಳಿಕೆ ವಿರೋಧಿಸಿ ನ.2 ಕ್ಕೆ ಒಕ್ಕಲಿಗ ಮುಖಂಡರಿಂದ ಪ್ರತಿಭಟನೆ

ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ಅವರ ವಿರುದ್ಧ ನವೆಂಬರ್ 2 ರಂದು ಪ್ರತಿಭಟನೆ ನಡೆಸಲು ರಾಜ್ಯ ಒಕ್ಕಲಿಗ ಒಕ್ಕೂಟ ನಿರ್ಧರಿಸಿದೆ ಎಂದು ಒಕ್ಕೂಟದ ಅಧ್ಯಕ್ಷ ಎಂಆರ್ ವೆಂಕಟೇಶ್ ಹೇಳಿದ್ದಾರೆ.

ಬೆಂಗಳೂರು: ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ಅವರ ವಿರುದ್ಧ ನವೆಂಬರ್ 2 ರಂದು ಪ್ರತಿಭಟನೆ ನಡೆಸಲು ರಾಜ್ಯ ಒಕ್ಕಲಿಗ ಒಕ್ಕೂಟ ನಿರ್ಧರಿಸಿದೆ ಎಂದು ಒಕ್ಕೂಟದ ಅಧ್ಯಕ್ಷ ಎಂಆರ್ ವೆಂಕಟೇಶ್ ಹೇಳಿದ್ದಾರೆ.

ಅ.28 ರಂದು ಬೆಂಗಳೂರಿನ ಶ್ರೀಗಂಧದ ಕಾವಲ್ ನಲ್ಲಿ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದ ಶಾಸಕ ಮುನಿರತ್ನ, ಆದಿಚುಂಚನಗಿರಿಯ ಶ್ರೀಗಳ ಸಮ್ಮುಖದಲ್ಲಿ ಲಘುವಾಗಿ ಮಾತನಾಡಿದ್ದರು, ಇದನ್ನು ವಿರೋಧಿಸಿ ಒಕ್ಕಲಿಗ ಒಕ್ಕೂಟ ಪ್ರತಿಭಟನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ನಿರ್ಮಲಾನಂದನಾಥ ಶ್ರೀಗಳ ಸಮ್ಮುಖದಲ್ಲಿ ಮಾತನಾಡಿದ್ದ ಶಾಸಕ ಮುನಿರತ್ನ, ರಾಜಕಾರಣಿಗಳು ಎಷ್ಟೇ ಪ್ರಾಮಾಣಿಕರಾಗಿದ್ದರೂ, ಅವರ ವಿರುದ್ಧ ತಪ್ಪನ್ನು ಹೊರಿಸಲಾಗುತ್ತಿದೆ. 70 ವರ್ಷಗಳ ಕಾಲ ರಾಜ್ಯದ ಬಹುತೇಕ ಪಕ್ಷಗಳ ನಾಯಕರು ಆಳ್ವಿಕೆ ನಡೆಸಿದ್ದಾರೆ. ಆದ್ದರಿಂದ ಈಗ ಸ್ವಾಮೀಜಿಯವರೇ ರಾಜ್ಯ ಆಳಲಿ ಎಂದು ಮುನಿರತ್ನ ಅಭಿಪ್ರಾಯಪಟ್ಟಿದ್ದರು. ಆದಿಚುಂಚನ ಗಿರಿ ಸ್ವಾಮೀಜಿಗಳ ಎದುರು ಮುನಿರತ್ನ ಹಗುರ ಹೇಳಿಕೆ ನೀಡಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಒಕ್ಕಲಿಗ ಒಕ್ಕೂಟದ ಮುಖಂಡರು, ಹೇಳಿಕೆಯನ್ನು ವಿರೋಧಿಸಿ ನವೆಂಬರ್. 2 ರಂದು ರಾಜರಾಜೇಶ್ವರಿ ನಗರದ ಆರ್ಚ್ ಬಳಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT