ಯಶಸ್ವಿನಿ 
ರಾಜ್ಯ

ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದ ಲೇಡಿ ರೌಡಿ ಶೀಟರ್ ಯಶಸ್ವಿನಿ ಬಂಧನ

ಆಸ್ಪತ್ರೆಯಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದ ಲೇಡಿ ರೌಡಿ ಶೀಟರ್ ಯಶಸ್ವಿನಿಯನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಆಸ್ಪತ್ರೆಯಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದ ಲೇಡಿ ರೌಡಿ ಶೀಟರ್ ಯಶಸ್ವಿನಿಯನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ.
ಮೀಟರ್ ಬಡ್ಡಿ ದಂಧೆ ನಡೆಸುತ್ತಿದ್ದ ಯಶಸ್ವಿನಿ ಹಣಕಾಸು ವಿಚಾರಕ್ಕೆ ಸಂಬಂಧಿಸಿದಂತೆ ಉಷಾರಾಣಿ ಎಂಬುವವರ ಮೇಲೆ ಹಲ್ಲೆ ಮಾಡಿದ ಆರೋಪ ಎದುರಿಸುತ್ತಿದ್ದು, ಕಳೆದ ಕೆಲವು ತಿಂಗಳಿನಿಂದ ತಲೆ ಮರೆಸಿಕೊಂಡಿದ್ದಳು.
ಉಷಾ ಮೇಲೆ ಹಲ್ಲೆ ಮಾಡಿದ್ದ ಆರೋಪದ ಮೇಲೆ ಪೊಲೀಸರು ಯಶಸ್ವಿನಿಯನ್ನು ಬಂಧಿಸಿದ್ದರು. ಆದರೆ ಎದೆ ನೋವು ಎಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಲೇಡಿ ರೌಡಿ, ಮೇ 13ರಂದು ಅಲ್ಲಿಂದ ಪೊಲೀಸರ ಕಣ್ಣು ತಪ್ಪಿಸಿ ಪರಾರಿಯಾಗಿದ್ದಳು. ಯಶಸ್ವಿನಿ ಹಿಡಿಯಲು ಮೂರು ತಂಡಗಳನ್ನು ರಚನೆ ಮಾಡಲಾಗಿತ್ತು. ಕಡೆಗೂ ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು ಇಂದು ಲೇಡಿ ರೌಡಿ ಯಶಸ್ವಿನಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
'ಹಣಕಾಸು ವಿಚಾರದಲ್ಲಿ ಜಗಳ ಮಾಡಿಕೊಂಡು ನನ್ನ ಮನೆಗೆ ನುಗ್ಗಿ, ನನ್ನ ಮೇಲೆ ಯಶಸ್ವಿನಿ ಹಲ್ಲೆ ಮಾಡಿದ್ದಾಳೆ' ಎಂದು ಉಷಾರಾಣಿ ಪೊಲೀಸರಿಗೆ ದೂರು ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT