ರಾಜ್ಯ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ 
ರಾಜ್ಯ

ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಹಿಡನ್ ಕ್ಯಾಮೆರಾ: ಮಂಗಳೂರು ವಿವಿಗೆ ರಾಯರೆಡ್ಡಿ ಭೇಟಿ

ಮಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ದೊರಕಿದ್ದ ಹಿಡನ್ ಕ್ಯಾಮೆರಾ ಪ್ರಕರಣ ಹಿನ್ನೆಲೆಯಲ್ಲಿ ರಾಜ್ಯ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿಯವರು...

ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ದೊರಕಿದ್ದ ಹಿಡನ್ ಕ್ಯಾಮೆರಾ ಪ್ರಕರಣ ಹಿನ್ನೆಲೆಯಲ್ಲಿ ರಾಜ್ಯ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿಯವರು ವಿವಿಗೆ ಭೇಟಿ ನೀಡಿ ಶುಕ್ರವಾರ ಪರಿಶೀಲನೆ ನಡೆಸಿದರು.

ಭೇಟಿ ವೇಳೆ ರಾಯರೆಡ್ಡಿಯವರೊಂದಿಗೆ ಮಾತುಕತೆ ನಡೆಸಿದ ವಿವಿಯ ಆಡಳಿತ ಮಂಡಳಿಯು, ವಿಶ್ವವಿದ್ಯಾಲಯದ ನಿರ್ಲಕ್ಷ್ಯದಿಂದಾಗಿ ಘಟನೆ ನಡೆದಿಲ್ಲ ಎಂದು ಹೇಳಿದರು.

ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡಿದ ರಾಯರೆಡ್ಡಿಯವರು, ಭದ್ರತೆ ಕುರಿತಂತೆ ನಮ್ಮಿಂದ ಯಾವುದೇ ಸಮಸ್ಯೆಗಳು ಉಂಟಾಗಿಲ್ಲ. ಪ್ರತೀ ಬಾರಿ ಶೌಚಾಲಯವನ್ನು ತಪಾಸಣೆ ಮಾಡಲು ಸಾಧ್ಯವಾಗುವುದಿಲ್ಲ. ಪ್ರಸ್ತುತ ವಿಶ್ವವಿದ್ಯಾಲಯ ಪ್ರಕರಣವನ್ನು ದಾಖಲು ಮಾಡಿದೆ. ದುಷ್ಕರ್ಮಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುತ್ತದೆ. ಈ ಕುರಿತಂತೆ ಸಮಿತಿಯೊಂದನ್ನು ಈಗಾಗಲೇ ರಚನೆ ಮಾಡಲಾಗಿದೆ. ಪ್ರಕರಣದ ಎಲ್ಲಾ ಕಾರ್ಯವನ್ನು ಸಮಿತಿಯೇ ನೋಡಿಕೊಳ್ಳಲಿದೆ ಎಂದು ಹೇಳಿದ್ದಾರೆ.

ಘಟನೆ ಸೈಬರ್ ಕ್ರೈಂಗೆ ಸಂಬಂಧಿಸಿದ್ದು, ಪ್ರಕರಣವನ್ನು ಸೈಬರ್ ಕ್ರೈಮ್ ಪೊಲೀಸರಿಗೆ ವರ್ಗಾಯಿಸಲಾಗುವುದು ಎಂದು ಕೊಣಾಜೆ ಪೊಲೀಸರು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಶನಿವಾರ; ತದನಂತರ ನೂತನ ಸಿಎಂ ಪದಗ್ರಹಣ ಸಾಧ್ಯತೆ!

Karnataka CM News LIVE Updates | ಸಿದ್ದರಾಮಯ್ಯ ರಾಜೀನಾಮೆ; ಸಿಎಲ್‌ಪಿ ಸಭೆ ಶನಿವಾರ; ಅಂದೇ ನೂತನ ಸಿಎಂ ಪ್ರಮಾಣ ವಚನ ಸಾಧ್ಯತೆ!

ವಿದಾಯದ ಕೊನೇ ಕ್ಷಣದಲ್ಲೂ Siddaramaiah ಮಹತ್ವದ ಕ್ರಮ: ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ವರ್ಗಾವಣೆ

ನಿಮ್ಮ ಪ್ರೀತಿಗೆ ಧನ್ಯವಾದ: ರಾಜೀನಾಮೆ ನೀಡಿದ ಬಳಿಕ ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಭಾವುಕ ಪೋಸ್ಟ್!

ಸೌದಿಯಲ್ಲಿ ಗಲ್ಲು ಶಿಕ್ಷೆ: 20 ವರ್ಷಗಳ ಬಳಿಕ ಕೊನೆಗೂ ತಾಯಿಯ ಮಡಿಲು ಸೇರಿದ ಕೇರಳ ವ್ಯಕ್ತಿ, 28 ದಿನಗಳಲ್ಲೇ ಬದಲಾದ ಬದುಕು, ಅತೀ ದೊಡ್ಡ ಕ್ರೌಡ್ ಫಂಡಿಂಗ್ ಅಭಿಯಾನ!

SCROLL FOR NEXT