ರಾಜ್ಯ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ 
ರಾಜ್ಯ

ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಹಿಡನ್ ಕ್ಯಾಮೆರಾ: ಮಂಗಳೂರು ವಿವಿಗೆ ರಾಯರೆಡ್ಡಿ ಭೇಟಿ

ಮಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ದೊರಕಿದ್ದ ಹಿಡನ್ ಕ್ಯಾಮೆರಾ ಪ್ರಕರಣ ಹಿನ್ನೆಲೆಯಲ್ಲಿ ರಾಜ್ಯ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿಯವರು...

ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ದೊರಕಿದ್ದ ಹಿಡನ್ ಕ್ಯಾಮೆರಾ ಪ್ರಕರಣ ಹಿನ್ನೆಲೆಯಲ್ಲಿ ರಾಜ್ಯ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿಯವರು ವಿವಿಗೆ ಭೇಟಿ ನೀಡಿ ಶುಕ್ರವಾರ ಪರಿಶೀಲನೆ ನಡೆಸಿದರು.

ಭೇಟಿ ವೇಳೆ ರಾಯರೆಡ್ಡಿಯವರೊಂದಿಗೆ ಮಾತುಕತೆ ನಡೆಸಿದ ವಿವಿಯ ಆಡಳಿತ ಮಂಡಳಿಯು, ವಿಶ್ವವಿದ್ಯಾಲಯದ ನಿರ್ಲಕ್ಷ್ಯದಿಂದಾಗಿ ಘಟನೆ ನಡೆದಿಲ್ಲ ಎಂದು ಹೇಳಿದರು.

ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡಿದ ರಾಯರೆಡ್ಡಿಯವರು, ಭದ್ರತೆ ಕುರಿತಂತೆ ನಮ್ಮಿಂದ ಯಾವುದೇ ಸಮಸ್ಯೆಗಳು ಉಂಟಾಗಿಲ್ಲ. ಪ್ರತೀ ಬಾರಿ ಶೌಚಾಲಯವನ್ನು ತಪಾಸಣೆ ಮಾಡಲು ಸಾಧ್ಯವಾಗುವುದಿಲ್ಲ. ಪ್ರಸ್ತುತ ವಿಶ್ವವಿದ್ಯಾಲಯ ಪ್ರಕರಣವನ್ನು ದಾಖಲು ಮಾಡಿದೆ. ದುಷ್ಕರ್ಮಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುತ್ತದೆ. ಈ ಕುರಿತಂತೆ ಸಮಿತಿಯೊಂದನ್ನು ಈಗಾಗಲೇ ರಚನೆ ಮಾಡಲಾಗಿದೆ. ಪ್ರಕರಣದ ಎಲ್ಲಾ ಕಾರ್ಯವನ್ನು ಸಮಿತಿಯೇ ನೋಡಿಕೊಳ್ಳಲಿದೆ ಎಂದು ಹೇಳಿದ್ದಾರೆ.

ಘಟನೆ ಸೈಬರ್ ಕ್ರೈಂಗೆ ಸಂಬಂಧಿಸಿದ್ದು, ಪ್ರಕರಣವನ್ನು ಸೈಬರ್ ಕ್ರೈಮ್ ಪೊಲೀಸರಿಗೆ ವರ್ಗಾಯಿಸಲಾಗುವುದು ಎಂದು ಕೊಣಾಜೆ ಪೊಲೀಸರು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!

Nepal Floods: ಭೀಕರ ಪ್ರವಾಹದಲ್ಲಿ 30 ದೇಶಗಳ ನಾಗರೀಕರು ನಾಪತ್ತೆ, ಅಮೆರಿಕದವರೇ ಅತಿ ಹೆಚ್ಚು!

ಭಾರತ-ಶ್ರೀಲಂಕಾ 2ನೇ ಟೆಸ್ಟ್ ಡ್ರಾದಲ್ಲಿ ಅಂತ್ಯ; WTC ಪಾಯಿಂಟ್ಸ್‌ ಟೇಬಲ್‌ನಲ್ಲಿ ಟೀಂ ಇಂಡಿಯಾಗೆ ಭಾರೀ ಹೊಡೆತ!

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಶಿವಕುಮಾರ್