ನಗರ ಪೊಲೀಸ್ ಆಯುಕ್ತ ಎನ್.ಎಸ್ ಮೇಘರಿಕ್ 
ರಾಜ್ಯ

ಕಾವೇರಿ ತೀರ್ಪಿಗೆ ವಿರೋಧ: ಬಂದ್ ಹಿನ್ನೆಲೆ ನಗರದಲ್ಲಿ ಹೆಚ್ಚಿದ ಭದ್ರತೆ

ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶ ವಿರೋಧಿಸಿ ಕನ್ನಡಪರ ಸಂಘಟನೆಗಳು ಹಾಗೂ ಜನಪರ ಸಂಘಟನೆಗಳು ನೀಡಿರುವ ಕರ್ನಾಟಕ ರಾಜ್ಯ ಬಂದ್...

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶ ವಿರೋಧಿಸಿ ಕನ್ನಡಪರ ಸಂಘಟನೆಗಳು ಹಾಗೂ ಜನಪರ ಸಂಘಟನೆಗಳು ನೀಡಿರುವ ಕರ್ನಾಟಕ ರಾಜ್ಯ ಬಂದ್ ಕರೆ ಹಿನ್ನೆಲೆಯಲ್ಲಿ ನಗರದಲ್ಲಿ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ.

ನಾಳೆ ರಾಜ್ಯದಾದ್ಯಂತ ಬಂದ್ ಆಚರಿಸಲಾಗುತ್ತಿದ್ದು, ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ನಗರದಾದ್ಯಂತ ಈಗಾಗಲೇ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ವಿಮಾನ ನಿಲ್ದಾಣ ಹಾಗೂ ರೈಲು ನಿಲ್ದಾಣಗಳಲ್ಲಿ ವಿಶೇಷ ಭದ್ರತೆಯನ್ನು ಒದಗಿಸಲಾಗಿದೆ.

ಭದ್ರತೆ ಕುರಿತಂತೆ ಮಾಹಿತಿ ನೀಡಿರುವ ನಗರ ಪೊಲೀಸ್ ಆಯುಕ್ತ ಎನ್.ಎಸ್ ಮೇಘರಿಕ್ ಅವರು, ಅಹಿತಕರ ಘಟನೆ ನಡೆಯದಂತೆ ಈಗಾಗಲೇ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ನಗರದಲ್ಲಿ ಭದ್ರತೆಯನ್ನೂ ಹೆಚ್ಚಿಸಲಾಗಿದೆ ಎಂದು ಹೇಳಿದ್ದಾರೆ.

ಕೆಎಸ್ಆರ್ ಪಿ ತುಕಡಿಗಳು, ನಗರ ಪೊಲೀಸರು ಸೇರಿದಂತೆ 1000 ಗೃಹ ರಕ್ಷಕ ದಳದ ಸಿಬ್ಬಂದಿಗಳು, 16 ಡಿಸಿಪಿಗಳು, 21 ಎಸಿಪಿ, 105 ಪಿಎಸ್ಐ, 327 ಎಎಸ್ಐ, 929 ಮುಖ್ಯ ಪೇದೆಗಳು ಹಾಗೂ 1976 ಪೇದೆಗಳು ಭದ್ರತೆ ಒದಗಿಸಲಿದ್ದಾರೆ. ಇದಲ್ಲದೆ, , 1 ವಾಟರ್ ಜೆಟ್, 260 ಹೊಯ್ಸಳ ವಾಹನಗಳು ನಿರಂತರವಾಗಿ ನಗರದಲ್ಲಿ ಗಸ್ತು ತಿರುಗಲಿವೆ. ಶಾಂತಿಯುತವಾಗಿ ಬಂದ್ ನಡೆಸಬೇಕಿದ್ದು, ಅಹಿತಕರ ಘಟನೆ ನಡೆಯಬಾರದು ಎಂಬ ಉದ್ದೇಶದಿಂದ ಎಚ್ಚರಿಕೆ ವಹಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ರಾಜ್ಯಸಭಾ ಸದಸ್ಯತ್ವ ನಿರಾಕರಣೆ

ವಿದಾಯದ ಕೊನೇ ಕ್ಷಣದಲ್ಲೂ Siddaramaiah ಮಹತ್ವದ ಕ್ರಮ: ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ವರ್ಗಾವಣೆ

Siddaramaiah Press Meet: 'ಹೈಕಮಾಂಡ್ ಆದೇಶದ ಮೇಲೆ ರಾಜಿನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ವಿದಾಯದ ಮಾತು

'ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯನಾಗಿರುತ್ತೇನೆ': ಸಿದ್ದರಾಮಯ್ಯ

ರಾಜ್ಯದ ಮುಂದಿನ CM ಆಗಲು ಕಾಂಗ್ರೆಸ್ ಟ್ರಬಲ್ ಶೂಟರ್ ರೆಡಿ: ಯಾರಿದು ಡಿಕೆ ಶಿವಕುಮಾರ್? ರಾಜಕೀಯವಾಗಿ ಬೆಳೆದುಬಂದದ್ದು ಹೇಗೆ?

SCROLL FOR NEXT