ಕಾನೂನು ಸಚಿವ ಟಿ.ಬಿ.ಜಯಚಂದ್ರ 
ರಾಜ್ಯ

ವಿಧಾನ ಮಂಡಲ ವಿಶೇಷ ಅಧಿವೇಶನ ಮುಂದೂಡಿಕೆ: ಕಾನೂನು ಸಚಿವ ಜಯಚಂದ್ರ

ಸರಕು ಮತ್ತು ಸೇವಾ ತೆರಿಗೆ ಮಸೂದೆಗೆ(ಜಿಎಸ್ ಟಿ ಬಿಲ್) ಅನುಮೋದನೆ ನೀಡಲು ಸೆಪ್ಟೆಂಬರ್ 14 ರಂದು...

ಬೆಂಗಳೂರು: ಸರಕು ಮತ್ತು ಸೇವಾ ತೆರಿಗೆ ಮಸೂದೆಗೆ(ಜಿಎಸ್ ಟಿ ಬಿಲ್) ಅನುಮೋದನೆ ನೀಡಲು ಸೆಪ್ಟೆಂಬರ್ 14 ರಂದು ಕರೆಯಲಾಗಿದ್ದ ರಾಜ್ಯ ವಿಧಾನ ಮಂಡಲದ ವಿಶೇಷ ಅಧಿವೇಶನವನ್ನು ಮುಂದೂಡಲು ಶನಿವಾರ ನಡೆದ ಸಚಿವ ಸಂಪುಟ ಸಮ್ಮತಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ತುರ್ತು ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಸಣ್ಣ ನೀರಾವರಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ. ಬಿ. ಜಯಚಂದ್ರ ಸಚಿವ ಸಂಪುಟ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದರು.
ಸಂಸತ್‍ನಲ್ಲಿ ಅಂಗೀಕಾರವಾಗಿರುವ ಸರಕು ಮತ್ತು ಸೇವಾ ತೆರಿಗೆ ಮಸೂದೆಗೆ 17 ರಾಜ್ಯಗಳು ಈಗಾಗಲೇ ಅನುಮೋದನೆ ನೀಡಿರುವ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಅಂಕಿತ ಹಾಕಿರುವುದರಿಂದ ಈ ಮಸೂದೆಯು ಕಾನೂನು ಆಗಿದೆ. ಈ ಸಂದರ್ಭದಲ್ಲಿ ರಾಜ್ಯ ವಿಧಾನ ಮಂಡಲದ ಅಧಿವೇಶನದಲ್ಲಿ ಈ ಕಾನೂನಿಗೆ ಅನುಮೋದನೆ ನೀಡುವ ಅವಶ್ಯಕತೆ ಇಲ್ಲ ಎಂದು ಸ್ಪಷ್ಟಪಡಿಸಿದ ಅವರು, ಸೆಪ್ಟೆಂಬರ್ 14 ರಂದು ಕರೆದಿರುವ ರಾಜ್ಯ ವಿಧಾನ ಮಂಡಲದ ಅಧಿವೇಶನವನ್ನು ಮುಂದೂಡಲು ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲು ಸಂಪುಟ ತೀರ್ಮಾನಿಸಿದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ