ಸಾಂಕೇತಿಕ ಚಿತ್ರ 
ರಾಜ್ಯ

ಕಾವೇರಿ ವಿವಾದ, ಕನ್ನಡ ನಟರ ಬಗ್ಗೆ ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಹೇಳಿಕೆ: ಯುವಕನಿಗೆ ಥಳಿತ

ಕಾವೇರಿ ಜಲ ವಿವಾದ ಮತ್ತು ಕನ್ನಡ ಚಲನಚಿತ್ರ ನಟರ ವಿರುದ್ಧ ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಹೇಳಿಕೆ ಪೋಸ್ಟ್ ಮಾಡಿದ್ದ...

ಬೆಂಗಳೂರು: ಕಾವೇರಿ ಜಲ ವಿವಾದ ಮತ್ತು ಕನ್ನಡ ಚಲನಚಿತ್ರ ನಟರ ವಿರುದ್ಧ ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಹೇಳಿಕೆ ಪೋಸ್ಟ್ ಮಾಡಿದ್ದ 22 ವರ್ಷದ ವಿದ್ಯಾರ್ಥಿಯನ್ನು ಯುವಕರ ಗುಂಪೊಂದು ಥಳಿಸಿದ ಘಟನೆ ನಗರದಲ್ಲಿ ನಿನ್ನೆ ನಡೆದಿದೆ. 
ಶ್ರೀರಾಂಪುರದ ನಿವಾಸಿ ಸಂತೋಷ್, ಬನಶಂಕರಿಯ ಖಾಸಗಿ ಕಾಲೇಜೊಂದರಲ್ಲಿ ಎಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದು, ಆತ ಫೇಸ್ ಬುಕ್ ನಲ್ಲಿ ಕಾವೇರಿ ವಿವಾದ ಮತ್ತು ಕನ್ನಡ ನಟರ ಬಗ್ಗೆ ಜನರನ್ನು ಕೆರಳಿಸುವ ರೀತಿಯಲ್ಲಿ ಹೇಳಿಕೆಗಳನ್ನು ಪೋಸ್ಟ್ ಮಾಡಿದ್ದ. ನಿನ್ನೆ ಮಧ್ಯಾಹ್ನ ನಂತರ ಕಾಲೇಜಿಗೆ ಬಂದಿದ್ದ ಸಂತೋಷ್ ನನ್ನು ಸಾರ್ವಜನಿಕರು ಹಿಡಿದು ಚೆನ್ನಾಗಿ ಥಳಿಸಿದ್ದಾರೆ.ಆಗ ಸಂತೋಷ್ ಅವರಲ್ಲಿ ಕ್ಷಮೆಯಾಚಿಸಿದನು. ಅಷ್ಟು ಹೊತ್ತಿಗೆ ಅಲ್ಲಿಗೆ ಆಗಮಿಸಿದ ಗಿರಿನಗರ ಠಾಣೆಯ ಪೊಲೀಸರು ಆಗಮಿಸಿದರು. ಆಗ ಸಂತೋಷ್ ಮತ್ತು ಯುವಕರ ಗುಂಪು ಅಲ್ಲಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ.
ಬೆಂಗಳೂರಿನಲ್ಲಿ ಹುಟ್ಟಿ ಬೆಳೆದ ಸಂತೋಷ್ ಫೇಸ್ ಬುಕ್ ನಲ್ಲಿ ನಟರಾದ ಶಿವರಾಜ್ ಕುಮಾರ್, ದುನಿಯಾ ವಿಜಯ್, ರಾಗಿಣಿ ದ್ವಿವೇದಿ ಮತ್ತು ದರ್ಶನ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದನಂತೆ. ಆತನ ಸ್ನೇಹಿತರು ಫೇಸ್ ಬುಕ್ ನಲ್ಲಿ ಅಂತಹ ಹೇಳಿಕೆಗಳನ್ನು ಪೋಸ್ಟ್ ಮಾಡದಂತೆ ಎಚ್ಚರಿಕೆ ನೀಡಿದ್ದರಂತೆ. ಆದರೆ ಅವರ ಮಾತನ್ನು ಸಂತೋಷ್ ಕೇಳಲಿಲ್ಲ. 
ಕೆಲ ವರದಿಗಳ ಪ್ರಕಾರ, ಸಂತೋಷ್ ಗೆ ಹೊಡೆದ ಯುವಕರ ಗುಂಪು ಮೊದಲು ಆತನನ್ನು ಪೊಲೀಸ್ ಠಾಣೆಗೆ ಕರೆತಂದಿದ್ದರಂತೆ.ಆದರೆ ಪೊಲೀಸರು ಕೇಸು ದಾಖಲಿಸಿಕೊಳ್ಳಲಿಲ್ಲ. ಫೇಸ್ ಬುಕ್ ನಲ್ಲಿ ಅಂತಹ ಹೇಳಿಕೆಗಳನ್ನು ಪೋಸ್ಟ್ ಮಾಡಬಾರದೆಂದು ಎಚ್ಚರಿಕೆ ನೀಡಿ ಕಳುಹಿಸಿಕೊಟ್ಟಿದ್ದರಂತೆ. ಆದರೆ ಪೊಲೀಸರ ಮಾತುಗಳನ್ನು ಕೂಡ ಆತ ಕೇಳಲಿಲ್ಲ.
ಆದರೆ ಗಿರಿನಗರ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಅಧಿಕಾರಿ ಹೇಳುವ ಪ್ರಕಾರ, ಸಂತೋಷ್ ನನ್ನು ಪೊಲೀಸ್ ಠಾಣೆಗೆ ಕರೆತರಲಿಲ್ಲ. ಆತನಿಗೆ ಹೊಡೆದವರ ಗುಂಪು ಕ್ಷಮೆ ಕೇಳಿದ್ದರಿಂದ ಆತ ಕೇಸು ದಾಖಲಿಸಲಿಲ್ಲ. ನಮಗೆ ಸುದ್ದಿ ವಾಹಿನಿಯೊಂದು ಆ ಸುದ್ದಿಯನ್ನು ಪ್ರಸಾರ ಮಾಡಿದಾಗಲೇ ವಿಷಯ ಗೊತ್ತಾಗಿದ್ದು ಎನ್ನುತ್ತಾರೆ.
ಈ ಘಟನೆ ಸಂಬಂಧ ಸಂತೋಷ್ ಆಗಲಿ, ಆತನಿಗೆ ಹೊಡೆದ ಯುವಕರಾಗಲಿ ಕೇಸು ದಾಖಲಿಸಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT