ಹೈಕೋರ್ಟ್ 
ರಾಜ್ಯ

ತಿಪ್ಪಗೊಂಡನಹಳ್ಳಿ ಜಲಾಶಯ ರಕ್ಷಣೆಗೆ ನವೆಂಬರ್ ವರೆಗೂ 'ಹೈ' ಗಡುವು

ತಿಪ್ಪಗೊಂಡನಹಳ್ಳಿ ಜಲಾಶಯ ಸಂರಕ್ಷಣೆಗಾಗಿ ರಾಜ್ಯಸರ್ಕಾರಕ್ಕೆ ಶನಿವಾರ ಹೈಕೋರ್ಟ್ ನವೆಂಬರ್ ವರೆಗೂ ಗಡುವು ನೀಡಿದೆ...

ಬೆಂಗಳೂರು: ತಿಪ್ಪಗೊಂಡನಹಳ್ಳಿ ಜಲಾಶಯ ಸಂರಕ್ಷಣೆಗಾಗಿ ರಾಜ್ಯಸರ್ಕಾರಕ್ಕೆ ಶನಿವಾರ ಹೈಕೋರ್ಟ್ ನವೆಂಬರ್ ವರೆಗೂ ಗಡುವು ನೀಡಿದೆ.

ಜಲಾಶಯ ಮಾಲಿನ್ಯ ಕುರಿತಂತೆ ಸಲ್ಲಿಸಲಾಗಿದ್ದ ಅರ್ಜಿಯನ್ನು ನಿನ್ನೆ ನ್ಯಾಯಾಲಯ ವಿಚಾರಣೆ ನಡೆಸಿತ್ತು. ಇದರಂತೆ ವಾದ ಮಂಡಿಸಿದ್ದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಎಜಿ ಶಿವಣ್ಣ ಅವರು, ಜಲಾಶಯ ಸಂರಕ್ಷಣೆಗೆ ಸರ್ಕಾರಕ್ಕೆ ನವೆಂಬರ್ ವರೆಗೂ ಸಮಯ ನೀಡುವಂತೆ ಮುಖ್ಯ ನ್ಯಾಯಮೂರ್ತಿ ಸುಬ್ರೋ ಕಮಲ್ ಮುಖರ್ಜಿ ಹಾಗೂ ನ್ಯಾಯಮೂರ್ತಿ ರವಿ ಮಳಿಮಠ್ ಅವರ ಬಳಿ ಮನವಿ ಸಲ್ಲಿಸಿದ್ದರು. ಇದರಂತೆ ಮನವಿಯನ್ನು ಸ್ವೀಕರಿಸಿರುವ ಅವರು, ಜಲಾಶಯ ರಕ್ಷಣೆಗೆ ನವೆಂಬರ್ ವರೆಗೂ ಕಾಲಾವಕಾಶವನ್ನು ನೀಡಿದ್ದಾರೆ.

ನ್ಯಾಯಪೀಠವು ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆಗೆ 2014, ಫೆಬ್ರವರಿ 2 ರಂದು ಜಲಾಶಯ ಸಂರಕ್ಷಣೆ ಕುರಿತಂತೆ ಅಧ್ಯಯನ ನಡೆಯುವಂತೆ ಸೂಚನೆ ನೀಡಿತ್ತು. ಇದರಂತೆ ಕೆಲ ತಿಂಗಳ ಹಿಂದಷ್ಟೇ ಅಧಿಕಾರಿಗಳು ನ್ಯಾಯಾಲಯಕ್ಕೆ ವರದಿಯನ್ನು ಸಲ್ಲಿಸಿದ್ದರು.

ವರದಿಯಲ್ಲಿ ನೀರು ಸಂರಕ್ಷಣೆಗೆ ಜಲಾಶಯ ಅತ್ಯಂತ ಮುಖ್ಯವಾಗಿದ್ದು, ಇದೊಂದು ಅತ್ಯಂತ ಪ್ರಮುಖವಾದ ಜಲಾಶಯವಾಗಿದೆ. ಜಲಾಶಯದಲ್ಲಿರುವ ಮುಖ್ಯ ದ್ವಾರದ ಮೇಲೆ ಮತ್ತು ಇನ್ನಿತರೆ ವ್ಯವಸ್ಥೆಯಗಳ ಕಡೆಗೆ ಸೂಕ್ತ ರೀತಿಯಲ್ಲಿ ಗಮನಹರಿಸಬೇಕಿದೆ ಎಂದು ತಿಳಿಸಿತ್ತು. ಜಲಾಶಯದ ಟಿಜಿಆರ್, ಹೆಸರುಘಟ್ಟ ಟ್ಯಾಂಕ್ ಹಾಗೂ ಇನ್ನಿತರೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದು, ಇದರ ವಿರುದ್ಧ ಕ್ರಮಕೈಗೊಳ್ಳುವ ಅಗತ್ಯವಿದೆ ಎಂದು ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

SCROLL FOR NEXT