ಬಸ್ ಸಂಚಾರ ಇಲ್ಲದ ಕಾರಣ ನಡೆದುಕೊಂಡೇ ಸಾಗಿದ ಪ್ರಯಾಣಿಕರು 
ರಾಜ್ಯ

ಕಾವೇರಿ ವಿವಾದ: ಆತಂಕದಲ್ಲಿ ಬೆಂಗಳೂರು ತಮಿಳಿಗರು

ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ನಡೆದ ಹಲ್ಲೆ ಹಾಗೂ ಕಾವೇರಿ ಸಂಬಂಧ ಸುಪ್ರೀಂಕೋರ್ಟ್‌ ನೀಡಿರುವ ಆದೇಶ ವಿರೋಧಿಸಿ ವಿವಿಧ ಸಂಘಟನೆಗಳು ...

ಬೆಂಗಳೂರು: ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ನಡೆದ ಹಲ್ಲೆ ಹಾಗೂ ಕಾವೇರಿ ಸಂಬಂಧ ಸುಪ್ರೀಂಕೋರ್ಟ್‌ ನೀಡಿರುವ ಆದೇಶ ವಿರೋಧಿಸಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ ಕಾರಣ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ತಮಿಳುನಾಡಿನ ಹಲವೆಡೆ ಕರ್ನಾಟಕದ ವಾಹನಗಳಿಗೆ ಬೆಂಕಿ ಹಚ್ಚಿರುವುದು ಹಾಗೂ ಕನ್ನಡಿಗರ ಮೇಲೆ ಹಲ್ಲೆ ನಡೆದಿರುವುದು ಗೊತ್ತಾಗುತ್ತಿದ್ದಂತೆಯೇ ಮುನ್ನೆಚ್ಚರಿಕೆ ಕ್ರಮವಾಗಿ ಕರ್ನಾಟಕದ ನೊಂದಣಿಯ ಕಾರು, ಬಸ್ಸು, ಲಾರಿ ಸೇರಿದಂತೆ ಎಲ್ಲ ವಾಹನಗಳನ್ನು ಅತ್ತಿಬೆಲೆ ಗಡಿಯಲ್ಲಿ ತಡೆದು ಕರ್ನಾಟಕದತ್ತ ವಾಪಸ್  ಕಳುಹಿಸಲಾಯಿತು.

ಮೂಲಗಳ ಪ್ರಕಾರ ಕೆಲ ವರ್ಷಗಳ ಹಿಂದೆ ಕರ್ನಾಟಕದಲ್ಲಿ 80 ಲಕ್ಷ ತಮಿಳಿಗರು ವಾಸವಿದ್ದರು. ಬೆಂಗಳೂರಿನಲ್ಲೇ 25 ಲಕ್ಷ ಮಂದಿ ತಮಿಳು ಭಾಷಿಕರು ನೆಲೆಸಿದ್ದರು. ದಶಕಗಳಿಂದಲೂ ತಮಿಳು ಭಾಷಿಗರು ಕರ್ನಾಟದಲ್ಲೇ ನೆಲೆ ಕಂಡು ಕೊಂಡಿದ್ದಾರೆ.

ಬೆಂಗಳೂರು ತಮಿಳು ಸಂಘದ ಅಧ್ಯಕ್ಷ ದಾಮೋದರನ್ ಸಿಎ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಪರಮೇಶ್ವರ್ ಅವರನ್ನು ಭೇಟಿ ಮಾಡಿ ಬೆಂಗಳೂರಿನಲ್ಲಿರುವ ತಮಿಳು ಭಾಷಿಗರಿಗೆ ರಕ್ಷಣೆ ನೀಡುವಂತೆ ಕೋರಿದ್ದಾಗಿ ಹೇಳಿದ್ದಾರೆ.

ಜೊತೆಗೆ ತಮಿಳುನಾಡಿನಲ್ಲಿರುವ ಕನ್ನಡಿರಿಗೆ ರಕ್ಷಣೆ ನೀಡುವಂತೆಯೂ ಸಹ ಅಲ್ಲಿನ ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಪತ್ರ ಬರೆದಿರುವುದಾಗಿ ತಿಳಿಸಿದ್ದಾರೆ.

ಗಡಿಯಲ್ಲಿ ಪೊಲೀಸರು ಕೈಗೊಂಡಿದ್ದ ಸೂಕ್ತ ಮುಂಜಾಗ್ರತೆಯಿಂದ ಯಾವುದೇ ಅಹಿತಕರ ಘಟನೆ ನಡೆಯಲಿಲ್ಲ. ಸುಪ್ರೀಂಕೋರ್ಟ್ ಆದೇಶವನ್ನು ವಿರೋಧಿಸಿ ಕೆಲ ಕನ್ನಡಪರ ಸಂಘಟನೆ ಗಳ ಕಾರ್ಯಕರ್ತರು ಗಡಿಯಲ್ಲಿ ಶಾಂತಿಯುತ ಪ್ರತಿಭಟನೆ  ನಡೆಸಿದರು.

ಇನ್ನೂ ತಮಿಳು ಭಾಷಿಗರು ವಾಸವಿರುವ ಬೆಂಗಳೂರಿನ ಹಲವು ಪ್ರದೇಶಗಳಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಕೇಂದ್ರ ಕೈಗಾರಿಕಾ ಭದ್ರತಾ ಪಡೆಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT