ಶಾಸಕ ಎಂ.ಟಿ ಕೃಷ್ಣಪ್ಪ 
ರಾಜ್ಯ

ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಆರೋಪ: ಜೆಡಿಎಸ್ ಶಾಸಕರ ಪುತ್ರನ ಬಂಧನ

ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದ ಆರೋಪದ ಮೇಲೆ ತುರುವೇಕೆರೆಯ ಜೆಡಿಎಸ್‌ ಶಾಸಕ ಎಂ.ಟಿ.ಕೃಷ್ಣಪ್ಪ ಅವರ ಪುತ್ರ ಕೆ.ರಾಜೀವ್‌ ಸೇರಿದಂತೆ ನಾಲ್ವರು ...

ಕುಶಾಲನಗರ: ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದ ಆರೋಪದ ಮೇಲೆ ತುರುವೇಕೆರೆಯ ಜೆಡಿಎಸ್‌ ಶಾಸಕ ಎಂ.ಟಿ.ಕೃಷ್ಣಪ್ಪ ಅವರ ಪುತ್ರ ಕೆ.ರಾಜೀವ್‌ ಸೇರಿದಂತೆ ನಾಲ್ವರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.

ಸೋಮವಾರಪೇಟೆ ತಾಲ್ಲೂಕು ಗುಡ್ಡೆಹೊಸೂರು ಸಮೀಪದ ಚಿಕ್ಕಬೆಟ್ಟಗೇರಿಯ ರಿವರ್‌್ ವ್ಯೂ ಹೋಮ್ ಸ್ಟೇ ಮೇಲೆ ಪೊಲೀಸರು ದಾಳಿ ನಡೆಸಿದ ಕುಶಾಲನಗರ ಗ್ರಾಮಾಂತರ ಪೊಲೀಸರು ಕೆ.ರಾಜೀವ್‌, ಹೋಂಸ್ಟೆ ಮಾಲೀಕ ಪ್ರಸನ್ನ, ಸೋಮವಾರಪೇಟೆಯ ಮಧು ಹಾಗೂ ಉದ್ಯಮಿ ಪ್ರಮೋದ್ ಅವರನ್ನು ಬಂಧಿಸಿದ್ದಾರೆ.

ಯುವತಿಯನ್ನು ರಕ್ಷಿಸಿ ಕೂಡಿಗೆಯ ಬಾಲಾಶ್ರಮಕ್ಕೆ ಸೇರಿಸಲಾಗಿದೆ. ಬಂಧಿತರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ಮಡಿಕೇರಿಯ ಜೈಲಿನಲ್ಲಿ ಇರಿಸಲಾಗಿದೆ.

ಎರಡು ದಿನಗಳ ನಂತರ ಬಂಧಿತ ರಾಜೀವ್ ಶಾಸಕ ಕೃಷ್ಣಪ್ಪ ಅವರ ಪುತ್ರ ಎಂಬುದು ತಿಳಿದು ಬಂದಿದೆ. ಪ್ರಕರಣಕ್ಕೂ ರಾಜೀವ್ ಗೂ ಇರುವ ಸಂಬಂಧದ ಬಗ್ಗೆ ಪೊಲೀಸರು ಯಾವುದೇ ಮಾಹಿತಿ ನೀಡಿಲ್ಲ, ಆದರೆ ರಾಜೀವ್ ಅವರ ಬಂಧನವನ್ನು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

SCROLL FOR NEXT