ಸಂಗ್ರಹ ಚಿತ್ರ 
ರಾಜ್ಯ

ಶೇ.25ಕ್ಕೆ ಇಳಿಯಲಿರುವ ರಾಜ್ಯದ 4 ಜಲಾಶಯಗಳ ಮಟ್ಟ

ರಾಜ್ಯ ಹಾಗೂ ನಗರದಲ್ಲೆಡೆ ನೀರಿನ ಅಭಾವ ಉಂಟಾಗಲು ಇನ್ನು ಕೆಲವೇ ದಿನಗಳು ಬಾಕಿಯಿದ್ದು, ಸೆಪ್ಟಂಬರ್ 20 ಕ್ಕೆ ರಾಜ್ಯದ ನಾಲ್ಕು ಪ್ರಮುಖ ಜಲಾಶಯಗಳ ಮಟ್ಟ ಶೇ.25ಕ್ಕೆ...

ಬೆಂಗಳೂರು: ರಾಜ್ಯ ಹಾಗೂ ನಗರದಲ್ಲೆಡೆ ನೀರಿನ ಅಭಾವ ಉಂಟಾಗಲು ಇನ್ನು ಕೆಲವೇ ದಿನಗಳು ಬಾಕಿಯಿದ್ದು, ಸೆಪ್ಟಂಬರ್ 20 ಕ್ಕೆ ರಾಜ್ಯದ ನಾಲ್ಕು ಪ್ರಮುಖ ಜಲಾಶಯಗಳ ಮಟ್ಟ ಶೇ.25ಕ್ಕೆ ಇಳಿಯಲಿದೆ.

ಕಳೆದ ಬಾರಿಗೆ ಹೋಲಿಕೆ ಮಾಡಿದರೆ ಈ ಬಾರಿಯ ಮಳೆ ಅತ್ಯಂತ ಕಡಿಮೆ ಮಟ್ಟದಲ್ಲಾಗಿದ್ದು, ಈ ಬಾರಿ ಜಲಾಶಯಗಳ ಮಟ್ಟ ಶೇ.50 ಕ್ಕೂ ತಲುಪಿಲ್ಲ. ಇದರ ಬೆನ್ನಲ್ಲೇ ಕಾವೇರಿ ನದಿ ನೀರಿಗಾಗಿ ತಮಿಳುನಾಡು ಖ್ಯಾತೆ ತೆಗೆದಿದೆ. ಸಂಕಷ್ಟದ ಮಧ್ಯೆಯೂ ಸುಪ್ರೀಂ ಆದೇಶದಂತೆ ರಾಜ್ಯ ಸರ್ಕಾರ ತಮಿಳುನಾಡು ರಾಜ್ಯಕ್ಕೆ ಕಾವೇರಿ ನೀರು ಹರಿಸುತ್ತಿದೆ.

ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 20 ಕ್ಕೆ ರಾಜ್ಯದ ಪ್ರಮುಖ ನಾಲ್ಕು ಜಲಾಶಯಗಳ ಮಟ್ಟ ಶೇ.25ಕ್ಕೆ ಇಳಿಯಲಿದೆ. ಪರಿಣಾಮ ಬೆಂಗಳೂರು, ಮೈಸೂರು ಮತ್ತು ಚಾಮರಾಜನಗರಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಎದುರಾಗಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಇತ್ತೀಚೆಗಷ್ಟೇ ಸಿದ್ದರಾಮಯ್ಯ ಅವರು ನೀರಿನ ಕೊರತೆ ಕುರಿತಂತೆ ಹೇಳಿಕೆಯೊಂದನ್ನು ನೀಡಿದ್ದರು. ಕೃಷಿಯನ್ನು ರಕ್ಷಿಸುವುದಕ್ಕಾಗಿ ಕೃಷಿ ಕ್ಷೇತ್ರಕ್ಕೆ ನೀರನ್ನು ಬಿಡುವುದಾಗಿ ಹೇಳಿದ್ದರು. ಅಲ್ಲದೆ, ಬೆಂಗಳೂರು, ಮೈಸೂರು ಮತ್ತು ಮಂಡ್ಯ ಜನರಿಗೆ ಕುಡಿಯುವ ನೀರಿಗಾಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕುಡಿಯುವ ನೀರಿಗೆ ಮುಂದಿನ ದಿನಗಳಲ್ಲಿ ಸಮಸ್ಯೆಗಳು ಎದುರಾಗುವುದಿಲ್ಲ ಎಂದು ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT