ಹೊತ್ತಿ ಉರಿಯುತ್ತಿರುವ ಕೆಪಿಎನ್ ಬಸ್ ಗಳು 
ರಾಜ್ಯ

ಕೆಪಿಎನ್ ಬಸ್ ಗಳಿಗೆ ಬೆಂಕಿ ಪ್ರಕರಣ: 7 ಮಂದಿ ಬಂಧನ

ತಮಿಳುನಾಡಿಗೆ ಕಾವೇರಿ ನೀರು ಹರಿಸಬೇಕು ಎಂಬ ಸುಪ್ರೀಂಕೋರ್ಟ್ ಆದೇಶ ಮತ್ತು ತಮಿಳುನಾಡಿಗೆ ನೀರ ಬಿಡುಗಡೆ ಮಾಡುತ್ತಿರುವುದನ್ನು ರಾಜ್ಯ....

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸಬೇಕು ಎಂಬ ಸುಪ್ರೀಂಕೋರ್ಟ್ ಆದೇಶ ಮತ್ತು ತಮಿಳುನಾಡಿಗೆ ನೀರ ಬಿಡುಗಡೆ ಮಾಡುತ್ತಿರುವುದನ್ನು ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ ಬೆಂಗಳೂರಿನಲ್ಲಿ ನಡೆದಿದ್ದ ಗಲಭೆ ವೇಳೆ ಕೆಪಿಎನ್ ಟ್ರಾವೆಲ್ಸ್ ಗೆ ಸೇರಿದ ಬಸ್ ಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಬುಧವಾರ ಏಳು ಮಂದಿಯನ್ನು ಬಂಧಿಸಿದ್ದಾರೆ.

ಕಳೆದ ಸೋಮವಾರ ಬೆಂಗಳೂರು-ಮೈಸೂರು ರಸ್ತೆಯಲ್ಲಿದ್ದ ಕೆಪಿಎನ್ ಡಿಪೋಗೆ ನುಗ್ಗಿದ್ದ ಏಳು ಮಂದಿ ಸುಮಾರು 35ಕ್ಕೂ ಹೆಚ್ಚು ಬಸ್ ಗಳಿಗೆ ಬೆಂಕಿಹಚ್ಚಿದ್ದರು.

ಈ ಘಟನೆಗೆ ಸಂಬಂಧಿಸಿದಂತೆ ಸಿಸಿಟಿವಿ ಫೂಟೇಜ್ ಪರಿಶೀಲನೆ ಬಳಿಕ ಆರೋಪಿಗಳನ್ನು ಪತ್ತೆಹಚ್ಚಿರುವ ರಾಜರಾಜೇಶ್ವರಿ ನಗರ ಠಾಣೆಯ ಪೊಲೀಸರು ಏಳು ಮಂದಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಗಳನ್ನು ರಕ್ಷಿತ್ (18), ಸತೀಶ್ (27) ಕೆಂಪೇಗೌಡ (28), ಪ್ರಕಾಶ್ (46), ಲೋಕೇಶ್ (25), ಚಂದನ್ ಎಂದು ಗುರುತಿಸಲಾಗಿದೆ.

ಈ ಎಲ್ಲಾ ಏಳು ಆರೋಪಿಗಳು ಡಿಸೋಜಾ ನಗರ, ವೀರ ಭದ್ರನಗರ ನಿವಾಸಿಗಳಾಗಿದ್ದು ಪೀಣ್ಯ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT