ಹೊತ್ತಿ ಉರಿಯುತ್ತಿರುವ ಕೆಪಿಎನ್ ಬಸ್ ಗಳು 
ರಾಜ್ಯ

ಕೆಪಿಎನ್ ಬಸ್ ಗಳಿಗೆ ಬೆಂಕಿ ಪ್ರಕರಣ: 7 ಮಂದಿ ಬಂಧನ

ತಮಿಳುನಾಡಿಗೆ ಕಾವೇರಿ ನೀರು ಹರಿಸಬೇಕು ಎಂಬ ಸುಪ್ರೀಂಕೋರ್ಟ್ ಆದೇಶ ಮತ್ತು ತಮಿಳುನಾಡಿಗೆ ನೀರ ಬಿಡುಗಡೆ ಮಾಡುತ್ತಿರುವುದನ್ನು ರಾಜ್ಯ....

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸಬೇಕು ಎಂಬ ಸುಪ್ರೀಂಕೋರ್ಟ್ ಆದೇಶ ಮತ್ತು ತಮಿಳುನಾಡಿಗೆ ನೀರ ಬಿಡುಗಡೆ ಮಾಡುತ್ತಿರುವುದನ್ನು ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ ಬೆಂಗಳೂರಿನಲ್ಲಿ ನಡೆದಿದ್ದ ಗಲಭೆ ವೇಳೆ ಕೆಪಿಎನ್ ಟ್ರಾವೆಲ್ಸ್ ಗೆ ಸೇರಿದ ಬಸ್ ಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಬುಧವಾರ ಏಳು ಮಂದಿಯನ್ನು ಬಂಧಿಸಿದ್ದಾರೆ.

ಕಳೆದ ಸೋಮವಾರ ಬೆಂಗಳೂರು-ಮೈಸೂರು ರಸ್ತೆಯಲ್ಲಿದ್ದ ಕೆಪಿಎನ್ ಡಿಪೋಗೆ ನುಗ್ಗಿದ್ದ ಏಳು ಮಂದಿ ಸುಮಾರು 35ಕ್ಕೂ ಹೆಚ್ಚು ಬಸ್ ಗಳಿಗೆ ಬೆಂಕಿಹಚ್ಚಿದ್ದರು.

ಈ ಘಟನೆಗೆ ಸಂಬಂಧಿಸಿದಂತೆ ಸಿಸಿಟಿವಿ ಫೂಟೇಜ್ ಪರಿಶೀಲನೆ ಬಳಿಕ ಆರೋಪಿಗಳನ್ನು ಪತ್ತೆಹಚ್ಚಿರುವ ರಾಜರಾಜೇಶ್ವರಿ ನಗರ ಠಾಣೆಯ ಪೊಲೀಸರು ಏಳು ಮಂದಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಗಳನ್ನು ರಕ್ಷಿತ್ (18), ಸತೀಶ್ (27) ಕೆಂಪೇಗೌಡ (28), ಪ್ರಕಾಶ್ (46), ಲೋಕೇಶ್ (25), ಚಂದನ್ ಎಂದು ಗುರುತಿಸಲಾಗಿದೆ.

ಈ ಎಲ್ಲಾ ಏಳು ಆರೋಪಿಗಳು ಡಿಸೋಜಾ ನಗರ, ವೀರ ಭದ್ರನಗರ ನಿವಾಸಿಗಳಾಗಿದ್ದು ಪೀಣ್ಯ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT