ತಾಪ್ ಸಿಂಹ - ವಿಶ್ವೇಶ್ವರ ಭಟ್ 
ರಾಜ್ಯ

ಪತ್ರಕರ್ತರ ಹತ್ಯೆಗೆ ಸಂಚು: 13 ಅಪರಾಧಿಗಳಿಗೆ ಐದು ವರ್ಷ ಜೈಲು ಶಿಕ್ಷೆ

ಪತ್ರಕರ್ತರು, ರಾಜಕಾರಣಿಗಳು, ಉದ್ಯಮಿಗಳು ಹಾಗೂ ಹಿಂದೂ ಸಂಘಟನೆಯ ಮುಖಂಡರ ಹತ್ಯೆಗೆ ಸಂಚು ರೂಪಿಸಿದ್ದ ಪ್ರಕರಣಕ್ಕೆ...

ಬೆಂಗಳೂರು: ಪತ್ರಕರ್ತರು, ರಾಜಕಾರಣಿಗಳು, ಉದ್ಯಮಿಗಳು ಹಾಗೂ ಹಿಂದೂ ಸಂಘಟನೆಯ ಮುಖಂಡರ ಹತ್ಯೆಗೆ ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲಯ ಶುಕ್ರವಾರ 13 ಅಪರಾಧಿಗಳಿಗೆ ಐದು ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ರಾಷ್ಟ್ರೀಯ ತನಿಖಾ ದಳದ ವಿಶೇಷ ನ್ಯಾಯಾಲಯ ಸಂಸದ ಪ್ರತಾಪ್ ಸಿಂಹ, ಪತ್ರಕರ್ತ ವಿಶ್ವೇಶ್ವರ ಭಟ್, ಉದ್ಯಮಿ ವಿಜಯ್ ಸಂಕೇಶ್ವರ ಹಾಗೂ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರ ಹತ್ಯೆಗೆ ಸಂಚು ರೂಪಿಸಿದ್ದ 13 ಆರೋಪಿಗಳು ತಪ್ಪಿತಸ್ಥರು ಎಂದು ನಿನ್ನೆ ತೀರ್ಪು ನೀಡಿತ್ತು. ಆದರೆ ಶಿಕ್ಷೆಯ ಪ್ರಮಾಣವನ್ನು ಇಂದಿಗೆ ಕಾಯ್ದರಿಸಿತ್ತು. 
ಅಪರಾಧಿಗಳಿಗೆ ಇಂದು ಶಿಕ್ಷೆ ಪ್ರಕಟಿಸಿದ ಕೋರ್ಟ್, 5 ವರ್ಷಗಳ ಜೈಲು ಶಿಕ್ಷೆ ಹಾಗೂ ತಲಾ 7 ಸಾವಿರ ರುಪಾಯಿ ದಂಡ ವಿಧಿಸಿದೆ. 
ಶೋಯಿಬ್‌ ಅಹ್ಮದ್‌ ಮಿರ್ಜಾ, ಮೊಹ್ಮದ್‌ ಸಾದಿಕ್‌ ಲಷ್ಕರ್‌, ಡಾ.ಇಮ್ರಾನ್‌ ಅಹ್ಮದ್‌, ಸಯ್ಯದ್‌ ತಾಂಜಿಮ್‌ ಅಹ್ಮದ್‌, ಡಾ.ನಯೀಂ ಸಿದ್ದಿಕಿ, ಅಬ್ದುಲ್‌ ಹಕೀಂ ಜಮಾದಾರ್‌, ಉಬೇದುಲ್ಲಾ ಬಹದ್ದೂರ್‌, ವಾಹಿದ್‌ ಹುಸೇನ್‌, ರಿಯಾಜ್‌ ಅಹ್ಮದ್‌ ಬ್ಯಾಹಟ್ಟಿ, ಮಹ್ಮದ್‌ ಅಕ್ರಮ್‌, ಡಾ.ಜಾಫ‌ರ್‌ ಇಕ್ಬಾಲ್, ಶೊಲ್ಲಾಪೂರ್‌, ಮೆಹಬೂಬ್‌ ಬಾಗಲಕೋಟ್‌ ಮತ್ತು ಒಬೈದ್‌ ಉರ್‌ ರೆಹಮಾನ್‌ ಪತ್ರಕರ್ತರು ಹಾಗೂ ಇತರೆ ಗಣ್ಯರ ಹತ್ಯೆಗೆ ಸಂಚು ರೂಪಿಸಿದ್ದರು. ಈ ಸಂಬಂಧ 2012ರ ಆಗಸ್ಟ್ 29ರಂದು ಪ್ರಕರಣ ದಾಖಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!