ನವಲಗುಂದ ಶಾಸಕ ಎನ್.ಹೆಚ್.ಕೋಣರೆಡ್ಡಿ 
ರಾಜ್ಯ

ಶಾಸಕನ ಪುತ್ರನ ವಿರುದ್ಧ ಯಾವುದೇ ಪ್ರಕರಣಗಳು ದಾಖಲಿಸಿಲ್ಲ: ಪೊಲೀಸರ ಸ್ಪಷ್ಟನೆ

ನವಲಗುಂದ ಶಾಸಕ ಎನ್.ಹೆಚ್.ಕೋಣರೆಡ್ಡಿ ಅವರ ಪುತ್ರ ಹಾಗೂ ಐವರ ವಿರುದ್ಧ ಉತ್ತರ ಕರ್ನಾಟಕ ಪೊಲೀಸರು ಯಾವುದೇ ರೀತಿಯ ಡಕಾಯಿತಿ ಪ್ರಕರಣ ದಾಖಲಿಸಿಲ್ಲ ಎಂದು ಪೊಲೀಸರು...

ಹುಬ್ಬಳ್ಳಿ: ನವಲಗುಂದ ಶಾಸಕ ಎನ್.ಹೆಚ್.ಕೋಣರೆಡ್ಡಿ ಅವರ ಪುತ್ರ ಹಾಗೂ ಐವರ ವಿರುದ್ಧ ಉತ್ತರ ಕರ್ನಾಟಕ ಪೊಲೀಸರು ಯಾವುದೇ ರೀತಿಯ ಡಕಾಯಿತಿ ಪ್ರಕರಣ ದಾಖಲಿಸಿಲ್ಲ ಎಂದು ಪೊಲೀಸರು ಗುರುವಾರ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತಂತೆ ಸ್ಪಷ್ಟನೆ ನೀಡಿರುವ ಪೊಲೀಸರು, ಬೆಂಗಳೂರಿನ ವ್ಯಕ್ತಿಯೊಬ್ಬರಿಂದ ದೂರು ದಾಖಲಾಗಿತ್ತು. ಶಾಸಕನ ಪುತ್ರನ ವಿರುದ್ಧ ಡಕಾಯಿತಿ ಪ್ರಕರಣವನ್ನು ದಾಖಲಿಸಿದ್ದರು. ತಮ್ಮನ್ನು ರಕ್ಷಣೆ ಮಾಡಿಕೊಳ್ಳುವುದಕ್ಕಾಗಿ ಪ್ರಕರಣ ದಾಖಲಿಸಿದ್ದಾರೆಂಬ ವಿಚಾರ ಇದೀಗ ತಿಳಿದುಬಂದಿದೆ. ಆಕಸ್ಮಿಕವಾಗಿ ಹಾಗೂ ತಪ್ಪು ಗ್ರಹಿಕೆಯ ಪ್ರಕರಣ ಇದಾಗಿದೆ ಎಂದು ಹೇಳಿದ್ದಾರೆ.

ಯುವರಾಜ್ ಲೋಕನಾಥನ್ ಎಂಬುವವರು ರಾಮನಗರ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿದ್ದರು. ರಾಮನಗರದ ಕೆಲ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ದಾಳಿ ಮಾಡಿ ನಮ್ಮಲ್ಲಿದ್ದ ರು.23 ಸಾವಿರ ಹಣವನ್ನು ಲೂಟಿ ಮಾಡಿದ್ದರೆಂದು ದೂರಿನಲ್ಲಿ ಹೇಳಿಕೊಂಡಿದ್ದರು.

ಪ್ರಕರಣ ಕುರಿತಂತೆ ಮಾಡನಾಡಿರುವ ದಾಂಡೇಲಿ ಸರ್ಕಲ್ ಪೊಲೀಸ್ ಇನ್ಸ್ ಪೆಕ್ಟರ್ ಶಿವಾಜಿ ಕಲೋಜಿ ಅವರು, ಶಾಸಕನ ಪುತ್ರ ಹಾಗೂ ಆತನ ಗೆಳೆಯರ ವಿರುದ್ಧ ತಪ್ಪುಗ್ರಹಿಕೆಯಿಂದ ಪ್ರಕರಣವನ್ನು ದಾಖಲು ಮಾಡಲಾಗಿದೆ. ಪ್ರಕರಣವನ್ನು ಯಾವ ಕಾರಣಕ್ಕೆ ದಾಖಲು ಮಾಡಿದ್ದೇನೆಂಬುದು ದೂರುದಾರನಿಗೇ ತಿಳಿಯುತ್ತಿಲ್ಲ. ಇದೀಗ ದೂರುದಾರ ದೂರನ್ನು ಹಿಂಪಡೆಯುವುದಾಗಿ ತಿಳಿಸಿದ್ದಾನೆಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT