ಬೆಂಗಳೂರು ಮೂಲದ ಟೆಕ್ಕಿ ಸಂತೋಷ್ 
ರಾಜ್ಯ

ಕಾವೇರಿ ಸಮಸ್ಯೆಗೆ ಪರಿಹಾರ: ಟೆಕ್ಕಿಯ ವಿಡಿಯೋ ಆಯ್ತು ವೈರಲ್

ಎರಡು ರಾಜ್ಯಗಳ ನಡುವಿನ ವೈಮನಸ್ಸಿಗೆ ಕಾರಣವಾಗಿರುವ ಕಾವೇರಿ ವಿವಾದಕ್ಕೆ ಬೆಂಗಳೂರು ಮೂಲದ ಟೆಕ್ಕಿಯೊಬ್ಬ ನೀಡಿರುವ ಪರಿಹಾರದ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ...

ಬೆಂಗಳೂರು: ಎರಡು ರಾಜ್ಯಗಳ ನಡುವಿನ ವೈಮನಸ್ಸಿಗೆ ಕಾರಣವಾಗಿರುವ ಕಾವೇರಿ ವಿವಾದಕ್ಕೆ ಬೆಂಗಳೂರು ಮೂಲದ ಟೆಕ್ಕಿಯೊಬ್ಬ ನೀಡಿರುವ ಪರಿಹಾರದ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವೃತ್ತಿಯಲ್ಲಿ ಇಂಜಿನಿಯರ್ ಆಗಿರುವ ಸಂತೋಷ್. ಜೆ ಎಂಬುವವರ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕೇವಲ ಒಂದೇ ದಿನದಲ್ಲಿ 25 ಸಾವಿರ ಜನರು ವಿಡಿಯೋವನ್ನು ನೋಡಿದ್ದಾರೆ. ಸಂತೋಷ್ ಬಿಎಂಎಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬೋದನೆ ಮಾಡುತ್ತಿದ್ದು, ಖಾಸಗಿ ಸಂಸ್ಥೆಯೊಂದರಲ್ಲಿ ವ್ಯವಸ್ಥಾಪಕ ನಿರ್ದೇಶಕರಾಗಿಯೂ ಕೆಲಸ ಮಾಡುತ್ತಿದ್ದಾರೆ.

ವಿಡಿಯೋದಲ್ಲಿ ಸಂತೋಷ್ ಅವರು, ಇಂಜಿನಿಯರ್ ಗಳು ವಸ್ತುಗಳ ತಯಾರಿಕೆಗೆ ಐಡಿಯಾಗಳನ್ನು ನೀಡಿ, ಆ ವಸ್ತುಗಳು ಮನೆಗೆ ತಲುಪುವಂತೆ ಮಾಡುತ್ತಿದ್ದಾರೆ. ಆದರೆ, ಕಾವೇರಿ ನದಿ ನೀರು ಸಮಸ್ಯೆಗೆ ಮಾಹಿತಿ ತಂತ್ರಜ್ಞಾನ ಮತ್ತು ಜಲ ಸಂಪನ್ಮೂಲ ಇಂಜಿನಿಯರ್ ಗಳೇಕೆ ಮುಂದೆ ಬಂದು ಶಾಶ್ವತ ಪರಿಹಾರವನ್ನು ನೀಡುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.

ಕಾವೇರಿ ವಿವಾದ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಕಾವೇರಿ ವಿವಾದ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಪರ ಮತ್ತು ವಿರೋಧ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ಸಾಕಷ್ಟು ಪ್ರತಿಭಟನೆಗಳು ನಡೆಯುತ್ತಿವೆ. ಕಾವೇರಿ ವಿವಾದ ಕುರಿತಂತೆ ಜನರಿಗೆ ಸರಿಯಾದ ರೀತಿಯಲ್ಲಿ ಮಾಹಿತಿ ನೀಡುವ ಅಗತ್ಯವಿದೆ. ನ್ಯಾಯಾಲಯ ನೀಡಿರುವ ಆದೇಶವನ್ನು ಜನರಿಗೆ ಅರ್ಥ ಮಾಡಿಸುವ ಅಗತ್ಯವಿದೆ ಎಂದು ಹೇಳಿದ್ದಾರೆ.

ಬುಧವಾರ ಲೈವ್ ನಲ್ಲಿಯೇ ವಿಡಿಯೋವನ್ನು ನೀಡಲಾಗಿತ್ತು. ಈ ವೇಳೆ ಸಾಕಷ್ಟು ಜನರು ತಮ್ಮ ಅಭಿಪ್ರಾಯ ಹಾಗೂ ಸಲಹೆಗಳನ್ನು ನೀಡಿದ್ದಾರೆ. ಸುಪ್ರೀಂ ಆದೇಶವನ್ನು ಜನರಿಗೆ ಸರಿಯಾದ ರೀತಿಯಲ್ಲಿ ತಲುಪಿಸಲು ಸೂಕ್ತವಾದ ಸಂವಹನ ಮಾಧ್ಯಮವಿಲ್ಲ. ಹೀಗಾಗಿ ವಿಡಿಯೋ ಮೂಲಕ ಸರ್ಕಾರ ಹಾಗೂ ಜನರ ನಡುವೆ ಏರ್ಪಟ್ಟಿರುವ ಅಂತರವನ್ನು ಸರಿಪಡಿಸಲು ನಾವು ಹೊರಟಿದ್ದೇವೆ. ಇಂಜಿನಿಯರ್ ಗಳು ಸಮಸ್ಯೆಗೆ ಪರಿಹಾರ ನೀಡುವಂತೆ ಈ ಮೂಲಕ ನಾವು ಅಗ್ರಹಿಸುತ್ತಿದ್ದೇವೆ. ಎಲ್ಲಾ ಸಲಹೆ ಹಾಗೂ ಅಭಿಪ್ರಾಯಗಳನ್ನು ಸಂಗ್ರಹಿಸಿ ಅಂತಿಮವಾಗಿ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಅಥಾವಾ ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಿದ್ದೇವೆಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

T20 World Cup, IND vs Pak: ಇಶಾನ್ ಕಿಶಾನ್ ಬ್ಯಾಟಿಂಗ್ ಅಬ್ಬರ; ಸ್ಪಿನ್ ಮೋಡಿಗೆ ಪಾಕ್ ತತ್ತರ, ಭಾರತಕ್ಕೆ 61 ರನ್ ಗೆಲುವು!

T20 World Cup 2026: ಸೂಪರ್ 8 ಹಂತಕ್ಕೆ ಭಾರತ ಲಗ್ಗೆ; ದೇಶಾದ್ಯಂತ ಸಂಭ್ರಮಾಚರಣೆ, ಗಣ್ಯರ ಶುಭಾಶಯ!

T20 World Cup 2026: 27 ಬಾಲ್ ಗಳಲ್ಲಿ ಅರ್ಧಶತಕ ಹೊಡೆದು, ಭಾರತದ ಸ್ಕೋರ್ ಹೆಚ್ಚಿಸಿದ ಇಶಾನ್ ಕಿಶಾನ್!

RSS ದೆವ್ವವಿದ್ದಂತೆ, ಬಿಜೆಪಿ ದೆವ್ವದ ನೆರಳು: ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಚಿಕ್ಕಮಗಳೂರು: ತಾಯಿ ಬೈದಿದ್ದಕ್ಕೆ 7ನೇ ತರಗತಿ ಬಾಲಕಿ ಆತ್ಮಹತ್ಯೆ!

SCROLL FOR NEXT