ರೈಲ್ವೆ ನಿಲ್ದಾಣದಲ್ಲಿ ಭದ್ರತೆ ನೀಡುತ್ತಿರುವ ಭದ್ರತಾ ಪಡೆ 
ರಾಜ್ಯ

ಕಾವೇರಿ ತೀರ್ಪಿಗೆ ವಿರೋಧ: ವಿಫಲವಾಯ್ತು ರೈಲು ಬಂದ್

ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಸುಪ್ರೀಂ ನೀಡಿದ್ದ ತೀರ್ಪು ವಿರೋಧಿ, ಸಮಸ್ಯೆ ಬಗೆಹರಿಸಲು ಪ್ರಧಾನಿ ಮೋದಿಯವರು ಮಧ್ಯಸ್ಥಿಕೆ ವಹಿಸುವಂತೆ ಆಗ್ರಹಿಸಿ ಗುರುವಾರ ನಡೆಸಲಾಗಿದ್ದ ರೈಲು...

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಸುಪ್ರೀಂ ನೀಡಿದ್ದ ತೀರ್ಪು ವಿರೋಧಿ, ಸಮಸ್ಯೆ ಬಗೆಹರಿಸಲು ಪ್ರಧಾನಿ ಮೋದಿಯವರು ಮಧ್ಯಸ್ಥಿಕೆ ವಹಿಸುವಂತೆ ಆಗ್ರಹಿಸಿ ಗುರುವಾರ ನಡೆಸಲಾಗಿದ್ದ ರೈಲು ಬಂದ್ ಆಚರಣೆಯನ್ನು ರಾಜ್ಯ ಪೊಲೀಸರು ವಿಫಲವಾಗುವಂತೆ ಮಾಡಿದ್ದಾರೆ.

ನಿನ್ನೆ ನೀಡಲಾಗಿದ್ದ ರೈಲು ಬಂದ್ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸರು ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಿದ್ದರು. ಬೆಂಗಳೂರು, ಮಂಡ್ಯ ಸೇರಿದಂತೆ ರಾಜ್ಯದ ಬಹುತೇಕ ಕಡೆ ಕನ್ನಡಪರ ಸಂಘಟನೆಗಳ ಮುಖಂಡರನ್ನು ಮೊದಲೇ ವಶಕ್ಕೆ ಪಡೆದುಕೊಂಡಿದ್ದರು,

ಅಲ್ಲದೆ, ಈ ಮೊದಲೇ ರೈಲು ನಿಲ್ದಾಣಗಳ ಎದುರು ಬ್ಯಾರಿಕೇಡ್ ಹಾಗೂ ಪೊಲೀಸರ ಸರ್ಪಗಾವಲು ಹಾಕುವ ಮೂಲಕ ಭಾರೀ ಬಂದೋಬಸ್ತ್ ನಿಯೋಜಿಸಲಾಗಿತ್ತು.

ಬಿಗಿ ಬಂದೋಬಸ್ತ್ ನಡುವೆಯೂ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಿಂದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದ ಕಾರ್ಯಕರ್ತರು ನಂತರ ರೈಲು ತಡೆಗೆ ಯತ್ನಿಸಿದ್ದರು. ಈ ವೇಳೆ ಮುಖಂಡರಾದ ವಾಟಾಳ್ ನಾಗರಾಜ್ ಸೇರಿದಂತೆ 50 ಕ್ಕೂ ಹೆಚ್ಚುಮಂದಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿತ್ತು.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದಲ್ಲಿ 800ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಲಾಗಿತ್ತು. ಈ ಮಟ್ಟಿಗಿನ ಭದ್ರತೆಯನ್ನು ಈ ಹಿಂದೆಂದೂ ನೀಡಲಾಗಿರಲಿಲ್ಲ ಸರ್ಕಾರದ ರೈಲ್ವೆ ಪೊಲೀಸ್ ವರಿಷ್ಠಾಧಿಕಾರಿ ಡಿ.ಸಿ. ರಾಜಪ್ಪ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಕ್ರಮ ಆಸ್ತಿ ಗಳಿಕೆ ಕೇಸು: ಜಮೀರ್ ಅಹ್ಮದ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಬೆನ್ನಲ್ಲೇ IPS ಅಧಿಕಾರಿ ವರ್ಗ

'ಧಮ್ ಇದ್ರೆ ನನ್ನ ಕೊಲ್ಲಿ.. ಕನಿಷ್ಠ 1 ಸಾವಿರ ಕ್ಷಿಪಣಿಗಳು ಲೋಡ್ ಆಗಿ ನಿಂತಿವೆ': ಇರಾನ್ ಗೆ Donald Trump ಎಚ್ಚರಿಕೆ

ಹಾರ್ಮುಜ್ ಜಲಸಂಧಿ ಮುಕ್ತವಾಗಿರಬೇಕು, ಅಣು ಒಪ್ಪಂದಕ್ಕೆ ಯುರೇನಿಯಂ ಹಸ್ತಾಂತರ ಕಡ್ಡಾಯ: ಅಮೆರಿಕ

ಭಾರತ–ನ್ಯೂಜಿಲ್ಯಾಂಡ್ ಸಂಬಂಧ ಕಾರ್ಯತಂತ್ರ ಪಾಲುದಾರಿಕೆಗೆ ಉನ್ನತಿ; 5 ವರ್ಷಗಳಲ್ಲಿ 35,000 ಕೋಟಿ ರೂ ವ್ಯಾಪಾರದ ಗುರಿ; Video

'ಮಟನ್ ಹಾಕ್ತೀವಿ ಅಂತ ಹೇಳಿ ಚಿಕನ್ ಕೊಟ್ರು': ರಣಾಂಗಣವಾಯ್ತು 'ನಿಕಾಹ್ ಸಮಾರಂಭ', 12 ಮಂದಿಗೆ ಗಾಯ, Video