ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ 
ರಾಜ್ಯ

ರತ್ನ ಪ್ರಭಾರನ್ನು ಮುಖ್ಯಕಾರ್ಯದರ್ಶಿ ಮಾಡಿ: ಸಿಎಂಗೆ ಬಿಎಸ್'ವೈ

ಸೆ.30 ಕ್ಕೆ ಸರ್ಕಾರದ ಮುಖ್ಯಕಾರ್ಯದರ್ಶಿ ಅರವಿಂದ ಜಾಧವ್ ಅವರು ನಿವೃತ್ತಿಗೊಳ್ಳಲಿದ್ದು, ಮುಂದಿನ ಮುಖ್ಯ ಕಾರ್ಯದರ್ಶಿ ಸ್ಥಾನಕ್ಕೆ ರತ್ನ ಪ್ರಭಾ ಅವರನ್ನು ನೇಮಕ ಮಾಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ...

ಬೆಂಗಳೂರು: ಸೆ.30 ಕ್ಕೆ ಸರ್ಕಾರದ ಮುಖ್ಯಕಾರ್ಯದರ್ಶಿ ಅರವಿಂದ ಜಾಧವ್ ಅವರು ನಿವೃತ್ತಿಗೊಳ್ಳಲಿದ್ದು, ಮುಂದಿನ ಮುಖ್ಯ ಕಾರ್ಯದರ್ಶಿ ಸ್ಥಾನಕ್ಕೆ ರತ್ನ ಪ್ರಭಾ ಅವರನ್ನು ನೇಮಕ ಮಾಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಆಗ್ರಹಿಸಿದ್ದಾರೆ.

ಸೆ.30 ರಂದು ರಾಜ್ಯ ಸರ್ಕಾರಿದ ಹಾಲಿ ಮುಖ್ಯ ಕಾರ್ಯದರ್ಶಿ ಅರವಿಂದ ಜಾಧವ್ ಅವರು ತಮ್ಮ ಸೇವೆಯಿಂದ ನಿವೃತ್ತಿ ಹೊಂದಲಿದ್ದು, ಅವರ ಸ್ಥಾನಕ್ಕೆ 1981 ಶ್ರೇಣಿಯ ಐಎಎಸ್ ಅಧಿಕಾರಿ ಸುಭಾಷ್ ಚಂದ್ರ ಕುಂಟಿಯಾ ಅವರನ್ನು ನೇಮಕ ಮಾಡಲು ಸರ್ಕಾರ ಚಿಂತನೆ ನಡೆಸಿವೆ ಎಂದು ಕೆಲ ವರದಿಗಳು ತಿಳಿಸಿವೆ.

ಈ ಹಿನ್ನೆಲೆಯಲ್ಲಿ ಬಿಜೆಪಿ ಮಹಿಳಾ ಕಾರ್ಯಕಾರಿ ಸಭೆ ಬಳಿಕ ಪ್ರತಿಕ್ರಿಯೆ ನೀಡಿರುವ ಯಡಿಯೂರಪ್ಪ ಅವರು, ರಾಜ್ಯ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರಿಯೊಬ್ಬರನ್ನು ನೇಮಕ ಮಾಡಲು ಸಿದ್ದರಾಮಯ್ಯ ಅವರು ಚಿಂತನೆ ನಡೆಸಿದ್ದಾರೆಂದು ತಿಳಿದುಬಂದಿದೆ. ರತ್ನಪ್ರಭಾ ಅವರು ಉತ್ತಮ ಅಧಿಕಾರಿಯಾಗಿದ್ದು, ಸಾಕಷ್ಟು ಜಿಲ್ಲೆಗಳಲ್ಲಿ ಉಪ ಆಯುಕ್ತರಾಗಿಯೂ ಕೆಲಸ ಮಾಡಿದ್ದಾರೆ. ಸಾಕಷ್ಟು ಇಲಾಖೆಗಳಲ್ಲೂ ಉನ್ನತ ಮಟ್ಟದಲ್ಲಿ ಶ್ರೇಣಿಯನ್ನುಗಳಿಸಿದ್ದಾರೆ. ದಲಿತ ಮಹಿಳಾ ಅಧಿಕಾರಿಯೊಬ್ಬರನ್ನು ಯಾವುದೇ ಕಾರಣಕ್ಕೂ ತಿರಸ್ಕರಿಸಬಾರದು. ಮುಖ್ಯ ಕಾರ್ಯದರ್ಶಿ ಹುದ್ದೆಗೆ ರತ್ನ ಪ್ರಭಾ ಅವರು ಅರ್ಹರಾಗಿದ್ದು, ರತ್ನ ಪ್ರಭಾ ಅವರನ್ನೇ ಮುಖ್ಯ ಕಾರ್ಯದರ್ಶಿಯಾಗಿಸಬೇಕೆಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT