ಆಹಾರ ಸಾಮಾಗ್ರಿ ಟೋಕನ್ ಪಡೆಯುವ ವೇಳೆ ಉಂಟಾದ ನೂಕು ನುಗ್ಗಲು 
ರಾಜ್ಯ

ಬೆಂಗಳೂರು: ಕಾಲ್ತುಳಿತ ಮಹಿಳೆ ಸಾವು, ಹಲವರಿಗೆ ಗಾಯ

ಆಹಾರ ಸಾಮಾಗ್ರಿ ಟೋಕನ್ ಪಡೆಯುವ ವೇಳೆ ಉಂಟಾದ ನೂಕು ನುಗ್ಗಲಿನಲ್ಲಿ ಕಾಲ್ತುಳಿತಕ್ಕೆ ಸಿಕ್ಕಿ 40 ವರ್ಷದ ಮಹಿಳೆಯೊಬ್ಬರು ಮೃತ ಪಟ್ಟಿರುವ ಘಟನೆ ...

ಬೆಂಗಳೂರು: ಆಹಾರ ಸಾಮಾಗ್ರಿ ಟೋಕನ್ ಪಡೆಯುವ ವೇಳೆ ಉಂಟಾದ ನೂಕು ನುಗ್ಗಲಿನಲ್ಲಿ ಕಾಲ್ತುಳಿತಕ್ಕೆ ಸಿಕ್ಕಿ 40 ವರ್ಷದ ಮಹಿಳೆಯೊಬ್ಬರು ಮೃತ ಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಮುಂದಿನ ವರ್ಷದ ರಂಜಾನ್ ಹಬ್ಬಕ್ಕಾಗಿ ಉಚಿತವಾಗಿ ಆಹಾರ ಸಾಮಾಗ್ರಿಗಳನ್ನು ವಿತರಿಸಲು, ಶಿವಾಜಿನಗರದ ಸಮುದಾಯ ಭವನವೊಂದರಲ್ಲಿ ಟೋಕನ್ ಹಂಚುವ ವೇಳೆ ಈ ಘಟನೆ ನಡೆದಿದೆ. ಘಟನೆಯಲ್ಲಿ ದೇವರ ಜೀವನಹಳ್ಳಿ  ಸಮೀಪದ ಮೋದಿ ರಸ್ತೆ ನಿವಾಸಿ ಜೀನತ್ ಉನ್ನೀಸಾ ಪಾಷಾ ಸಾವನ್ನಪ್ಪಿದ್ದಾರೆ.

ಸ್ಥಳೀಯ ರಿಯಲ್ ಎಸ್ಟೇಟ್ ಉದ್ಯಮಿ ಸೈಯ್ಯದ್ ಆಸಿಫ್ ಎಂಬುವರು 2017ರ ಮೇನಲ್ಲಿ ಉಚಿತವಾಗಿ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ ಮಾಡುವುದಾಗಿ ಹೇಳಿದ್ದರು. ಹೀಗಾಗಿ ಮಂಗಳವಾರ ರಾತ್ರಿಯಿಂದಲೇ ಜನಜಂಗುಳಿ ನೆರೆದಿತ್ತು. ಸಮುದಾಯ ಭವನದ ಗೇಟ್ ಅನ್ನು ತೆರೆದ ಕೂಡಲೇ ಎಲ್ಲರೂ ಒಟ್ಟಿಗೆ ಒಳಗೆ ನುಗ್ಗಿದರು. ಈ ವೇಳೆ ನೂಕು ನುಗ್ಗಲು ಉಂಟಾಯಿತು, ಈ ಸಂದರ್ಭದಲ್ಲಿ ಪೊಲೀಸರು ಲಾಠಿ ಚಾರ್ಜ್ ಮಾಡಲು ಮುಂದಾದರು, ತಪ್ಪಿಸಿಕೊಳ್ಳಲು ಒಳಗೆ ಓಡಿ ಹೋಗಲು ಯತ್ನಿಸಿದ ಜೀನತ್ ಉನ್ನೀಸಾ ಕೆಳಗೆ ಬಿದ್ದರು. ಮೇಲೇಳಲಾಗದೇ ಕಾಲ್ತುಳಿತಕ್ಕೆ ಸಿಕ್ಕಿ ಸಾವನ್ನಪ್ಪಿದರು ಎಂದು ಪ್ರತ್ಯಕ್ಷದರ್ಶಿ ಚಾಮುಂಡಿಪುರದ ನಿವಾಸಿ ಹೀನಾ ಎಂಬುವರು ಆರೋಪಿಸಿದ್ದಾರೆ.

ಲಾಠಿ ಚಾರ್ಜ್ ಮಾಡಿದ್ದಕ್ಕೆ ಸ್ಥಳೀಯರು ಪೊಲೀಸರ ವಿರುದ್ಧ ಹರಿಹಾಯ್ದಿದ್ದಾರೆ. ಕೂಪನ್ ಪಡೆದುಕೊಳ್ಳಲು ತುಮಕೂರಿನಿಂದಲೂ ಸಹ ಜನ ಆಗಮಿಸಿದ್ದರು. ಜೀನತ್ ಉನ್ನೀಸಾ ಗೆ ಮೂರು ಮಕ್ಕಳಿದ್ದು, ಆಕೆಯ ಪತಿ ಅನ್ಚಾರ್ ಪಾಶಾ ವರ್ಕ್ ಶಾಪ್ ವೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT