ರಾಜರಾಜೇಶ್ವರಿ ನಗರದಲ್ಲಿರುವ ನಟ ದರ್ಶನ್ ಮನೆ 
ರಾಜ್ಯ

ರಾಜ ಕಾಲುವೆ ಒತ್ತುವರಿ: ನಟ ದರ್ಶನ್ ಮನೆ ವಶಕ್ಕೆ ತೆಗೆದುಕೊಳ್ಳಲು ನಿರ್ಧಾರ

ರಾಜ ಕಾಲುವೆ ಒತ್ತುವರಿ ಮಾಡಿಕೊಂಡು ಮನೆ ನಿರ್ಮಾಣ ಮಾಡಿರುವ ಆರೋಪದ ಮೇಲೆ ರಾಜರಾಜೇಶ್ವರಿ ನಗರದಲ್ಲಿರುವ ನಟ ದರ್ಶನ್ ಅವರ ಮನೆಯನ್ನು ..

ಬೆಂಗಳೂರು: ರಾಜ ಕಾಲುವೆ ಒತ್ತುವರಿ ಮಾಡಿಕೊಂಡು ಮನೆ ನಿರ್ಮಾಣ  ಮಾಡಿರುವ ಆರೋಪದ  ಮೇಲೆ ರಾಜರಾಜೇಶ್ವರಿ ನಗರದಲ್ಲಿರುವ ನಟ ದರ್ಶನ್ ಅವರ ಮನೆಯನ್ನು ವಶಕ್ಕೆ ತೆಗೆದುಕೊಳ್ಳಲು ಜಿಲ್ಲಾಡಳಿತ ನಿರ್ಧರಿಸಿದೆ ಎಂದು ಮಾಧ್ಯಮದಲ್ಲಿ ವರದಿಯಾಗಿದೆ.

ರಾಜರಾಜೇಶ್ವರಿನಗರದ ಐಡಿಯಲ್‌ ಹೋಮ್ಸ್‌ ಬಡಾವಣೆಯಲ್ಲಿ ನಟ ದರ್ಶನ್‌ ಅವರ ಮನೆ ಹಾಗೂ ಶಾಮನೂರು ಶಿವಶಂಕರಪ್ಪ ಆಸ್ಪತ್ರೆ ಸೇರಿದಂತೆ 7 ಎಕರೆ, 31 ಗುಂಟೆ ಒತ್ತುವರಿ ಪ್ರದೇಶದಲ್ಲಿರುವ ಎಲ್ಲ ಕಟ್ಟಡಗಳನ್ನು ವಶಕ್ಕೆ ಪಡೆಯಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ..

ಐಡಿಯಲ್‌ ಹೋಮ್ಸ್‌ ಬಡಾವಣೆಯಲ್ಲಿ ಒಟ್ಟಾರೆ 194 ಕಟ್ಟಡ, ಮನೆಗಳಿವೆ. ಐಡಿಯಲ್‌ ಹೋಮ್ಸ್‌ ಬಡಾವಣೆಯು ‘ಬಿ’ ಖರಾಬು ಜಾಗದಲ್ಲಿ ಇರುವುದು ದೃಢಪಟ್ಟಿದೆ. ಹೀಗಾಗಿ ಒತ್ತುವರಿ ಮಾಡಿಕೊಂಡ ಎಲ್ಲ ಕಟ್ಟಡಗಳನ್ನೂ ಶೀಘ್ರವೇ ವಶಕ್ಕೆ ಪಡೆಯಲು ಜಿಲ್ಲಾಳಿತ ನಿರ್ಧರಿಸಿದೆ.

‘ಬಿ’ ಖರಾಬು ಭೂಮಿಯಲ್ಲಿ ಯಾವುದೇ ನಿರ್ಮಾಣ ಕಾಮಗಾರಿ ನಡೆಸಲು ಅವಕಾಶವಿಲ್ಲ. ಜುಲೈ 28ರಂದು ನಗರದಲ್ಲಿ ಮಹಾಪೂರ ಉಂಟಾದ ಬಳಿಕ ಭೂದಾಖಲೆಗಳ ಇಲಾಖೆಯಿಂದ ರಾಜಕಾಲುವೆಗಳ ಸರ್ವೇ ಮಾಡಿಸಲಾಗಿತ್ತು. ದರ್ಶನ್‌ ಅವರ ಮನೆ, ಎಸ್‌.ಎಸ್‌. ಆಸ್ಪತ್ರೆ ಸೇರಿದಂತೆ ವಿವಿಧ ಕಟ್ಟಡಗಳು 7 ಎಕರೆ 31 ಗುಂಟೆಗಳಷ್ಟು ವಿಸ್ತೀರ್ಣದ ರಾಜಕಾಲುವೆ ಒತ್ತುವರಿ ಮಾಡಿಕೊಂಡಿವೆ ಎಂದು ಪರಿಶೀಲನೆಯಿಂದ ತಿಳಿದು ಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT