ಸಾಂದರ್ಭಿಕ ಚಿತ್ರ 
ರಾಜ್ಯ

ತೆಂಗು ಬೆಳೆಗಾರರಿಗೆ ಸಂತೋಷದ ಸುದ್ದಿ: ನೀರಾ ನೀತಿಗೆ ಸಂಪುಟ ಅನುಮೋದನೆ

ಅಬಕಾರಿ ಕಾಯ್ದೆಗೆ ತಿದ್ದುಪಡಿ ತಂದು ರಾಜ್ಯದ ತೆಂಗು ಬೆಳೆಗಾರರು ನೀರಾ ಇಳಿಸುವಂತೆ ಅನುವು ಮಾಡಿಕೊಡಲು ‘ನೀರಾ ನೀತಿ’ಗೆ ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ...

ಬೆಂಗಳೂರು: ಅಬಕಾರಿ ಕಾಯ್ದೆಗೆ ತಿದ್ದುಪಡಿ ತಂದು ರಾಜ್ಯದ ತೆಂಗು ಬೆಳೆಗಾರರು ನೀರಾ ಇಳಿಸುವಂತೆ ಅನುವು ಮಾಡಿಕೊಡಲು ‘ನೀರಾ ನೀತಿ’ಗೆ ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಸಂಪುಟ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ ಜಯಚಂದ್ರ ನೀರಾ ಇಳಿಸಲು ಸಮಗ್ರ ಕಾನೂನೊಂದನ್ನು ಜಾರಿಗೆ ತರಬೇಕೆಂಬುದು ರೈತರ ಹಲವು ದಿನಗಳ ಬೇಡಿಕೆಯಾಗಿತ್ತು ಎಂದರು .

ಈ ನೀತಿ ಅನ್ವಯ ಸೀಮಿತ ಪ್ರಮಾಣದಲ್ಲಿ ನೀರಾ ಉತ್ಪಾದನೆ ಮಾಡಿ ಮಾರಾಟ ಮಾಡಲು ಸಂಘ– ಸಂಸ್ಥೆಗಳಿಗೆ ಅವಕಾಶ ಕೊಡಲಾಗುವುದು ಎಂದು ತಿಳಿಸಿದರು.

ನೀರಾ ಇಳಿಸುವುದರಿಂದ ತೆಂಗಿನ ಮರಗಳಿಗೆ ಹೆಚ್ಚಿನ ಶಕ್ತಿ ಬರುತ್ತದೆ. ನೀರಾ ಇಳಿಸುವುದರಿಂದ ಅವುಗಳ ಉತ್ಪನ್ನಗಳಿಂಗ ರೈತರಿಗೆ ಹೆಚ್ಚುವರಿ ಲಾಭ ಸಿಗುತ್ತದೆ ಎಂದು ಹೇಳಿದ ಅವರು ನೀರಾವನ್ನು ಪ್ಯಾಕೆಟ್ ಗಳಲ್ಲಿ ಹಾಕಿ ಮಾರಾಟ ಮಾಡಲಾಗುತ್ತದೆಯೆಂದು ತಿಳಿಸಿದರು.

ನೀರಾ ಇಳಿಸುವವರು ಮತ್ತು ಮಾರಾಟ ಮಾಡುವವರು ತೆಂಗು ಬೆಳೆಗಾರರ ಒಕ್ಕೂಟದ ಸದಸ್ಯರಾಗಿರಬೇಕು ಎಂಬ ಷರತ್ತು ಹಾಕಲಾಗುವುದು ಎಂದ ಅವರು ತಿಳಿಸಿದರು.

 ರಾಜ್ಯದಲ್ಲಿ  12 ಸಂಸ್ಥೆಗಳು ನೀರಾ ಉತ್ಪಾದನೆಗೆ ಮುಂದೆ ಬಂದಿವೆ. ನೀರಾ ಸಂಸ್ಕರಣೆ, ರಫ್ತಿಗೆ ಕೂಡ ಅವಕಾಶ ಸಿಗಲಿದೆ ಎಂದು  ವಿವರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT