ಅಪಘಾತಕ್ಕೀಡಾ ಮಾರುತಿ 800 ಕಾರು 
ರಾಜ್ಯ

ಬೆಂಗಳೂರು: ನಿದ್ದೆ ಮಂಪರಿನಲ್ಲಿ ಚಾಲನೆ, ಒಂದೇ ಕುಟುಂಬದ ಮೂವರು ಸಾವು

ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ನೈಸ್ ರಸ್ತೆಯ ಸೋಮಪುರ ಬಳಿ ಗುರುವಾರ ಬೆಳಿಗ್ಗೆ 6.30 ರ ...

ಬೆಂಗಳೂರು: ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಯಾಗಿ ಒಂದೇ  ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ನೈಸ್ ರಸ್ತೆಯ ಸೋಮಪುರ ಬಳಿ ಗುರುವಾರ ಬೆಳಿಗ್ಗೆ  6.30 ರ ವೇಳೆಗೆ ಸಂಭವಿಸಿದೆ.

ಬನಶಂಕರಿ ಸಮೀಪದ ಪ್ರಗತಿನಗರದ ನಿವಾಸಿಗಳಾದ ರಾಮಚಂದ್ರ (75), ಅವರ ಮಗಳು ಭಾಗೀರಥಿ (35) ಹಾಗೂ ಮಗ ಶಿವಕುಮಾರ್ (28)  ಮೃತ ದುರ್ದೈವಿಗಳು. ಇನ್ನೂ ಅಪಘಾತದಲ್ಲಿ  ಭಾಗೀರಥಿ ಅವರ ಮಗ ಭರತ್ (12), ಮಗಳು ಬಿಂದುಶ್ರೀ (10) ಹಾಗೂ ತಾಯಿ ಬಸಮ್ಮ (65) ಗಾಯಗೊಂಡಿದ್ದಾರೆ.

ಬುಧವಾರ ಬಸಮ್ಮ ಅವರ ತಂದೆಯ ವರ್ಷದ ಕಾರ್ಯವಿತ್ತು. ಹೀಗಾಗಿ, ಕುಟುಂಬ ಸದಸ್ಯರೆಲ್ಲ ಎರಡು ದಿನಗಳ ಹಿಂದೆ ತಮ್ಮ ‘ಮಾರುತಿ 800’ ಕಾರಿನಲ್ಲಿ ಕಲಬುರ್ಗಿಯ ಸಾಲಹಳ್ಳಿ ಗ್ರಾಮಕ್ಕೆ ತೆರಳಿದ್ದರು. ಕಾರ್ಯ ಮುಗಿಸಿಕೊಂಡು ಬುಧವಾರ ಸಂಜೆ  ಅಲ್ಲಿಂದ ಬೆಂಗಳೂರಿಗೆ ಹೊರಟಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಶಿವಕುಮಾರ್ ಮತ್ತು ಭಾಗಿರಥಿ ಸ್ಥಳದಲ್ಲೇ ಮೃತಪಟ್ಟರೇ. ಗಂಭೀರ ಗಾಯಗೊಂಡು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಮಚಂದ್ರ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ತಲಘಟ್ಟಪುರ ಪೊಲೀಸರು ತಿಳಿಸಿದ್ದಾರೆ. ರಾತ್ರಿಯಿಡೀ ಶಿವಕುಮಾರ್ ಒಬ್ಬರೇ ವಾಹನ ಚಾಲನೆ ಮಾಡಿದ್ದರಿಂದ, ಅವರಿಗೆ ನಿದ್ದೆಯ ಮಂಪರು  ಆವರಿಸಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT