ಮಾದೇಗೌಡ ನೇತೃತ್ವದಲ್ಲಿ ಪ್ರತಿಭಟನೆ 
ರಾಜ್ಯ

ಮಂಡ್ಯದಲ್ಲಿ ಮಾದೇಗೌಡ ನೇತೃತ್ವದಲ್ಲಿ ನಡೆಯುತ್ತಿದ್ದ ಕಾವೇರಿ ಹೋರಾಟ ಸ್ಥಗಿತ

ಕಾವೇರಿ ನೀರಿಗಾಗಿ ಮಂಡ್ಯದಲ್ಲಿ ನಡೆಯುತ್ತಿದ್ದ ಚಳುವಳಿಯನ್ನು ಶನಿವಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಕಾವೇರಿ...

ಮಂಡ್ಯ: ಕಾವೇರಿ ನೀರಿಗಾಗಿ ಮಂಡ್ಯದಲ್ಲಿ ನಡೆಯುತ್ತಿದ್ದ ಚಳುವಳಿಯನ್ನು ಶನಿವಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಕಾವೇರಿ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಜಿ.ಮಾದೇಗೌಡ ಅವರ ಹೇಳಿದ್ದಾರೆ.
ನಗರದ ಸರ್.ಎಂ. ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಮಾದೇಗೌಡ ಅವರ ನೇತೃತ್ವದಲ್ಲಿ ಕಳೆದ 18 ದಿನಗಳಿಂದ ಸುಪ್ರೀಂ ಕೋರ್ಟ್ ಆದೇಶದ ವಿರುದ್ಧ ಮತ್ತು ತಮಿಳುನಾಡಿಗೆ ನೀರು ಬಿಡದಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುತ್ತಿತ್ತು. ಆದರೆ ಸುಪ್ರೀಂ ಕೋರ್ಟ್ ಆದೇಶ ಪಾಲಿಸದಿರಲು ರಾಜ್ಯ ಸರ್ಕಾರ ನಿರ್ಧರಿಸಿದ ಹಿನ್ನೆಲೆಯಲ್ಲಿ ಮತ್ತು ಕಾವೇರಿ ಕೊಳ್ಳದ ರೈತರಿಗೆ ಪರಿಹಾರ ನೀಡುವುದಾಗಿ ಹಾಗೂ ಪ್ರತಿಭಟನೆ ವೇಳೆ ಬಂಧನಕ್ಕೊಳಗಾಗಿದ್ದ ರೈತರ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ ಹಿನ್ನೆಲೆಯಲ್ಲಿ ಇಂದು ಚಳವಳಿಯನ್ನು ಸ್ಥಗಿಗೊಳಿಸಲಾಗಿದೆ ಎಂದು ಮಾದೇಗೌಡರು ತಿಳಿಸಿದ್ದಾರೆ.
ಮಂಡ್ಯದಲ್ಲಿ ನಡೆಯುತ್ತಿದ್ದ ಪ್ರತಿಭಟನೆಗೆ ಕನ್ನಡಪರ ಸಂಘಟನೆಗಳು, ಕಲಾವಿದರು, ಸಾಹಿತಿಗಳು ಸೇರಿದಂತೆ ವಿವಿಧ ಸಂಘಟನೆಗಳು ಬೆಂಬಲ ನೀಡಿದ್ದವು.
ಮಾದೇಗೌಡ ಅವರು ತಮ್ಮ ಇಳಿ ವಯಸ್ಸಿನಲ್ಲೂ ಕಳೆದ ಗುರುವಾರ ಸರ್ಕಾರಿ ಕಚೇರಿಗಳಿಗೆ ತೆರಳಿ ಬಾಗಿಲು ಮುಚ್ಚಿಸುವ ಮೂಲಕ ಸುಪ್ರೀಂ ಕೋರ್ಟ್ ಆದೇಶದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT