ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ (ಸಂಗ್ರಹ ಚಿತ್ರ) 
ರಾಜ್ಯ

ಫಲಿತಾಂಶ ಪ್ರಕಟಿಸದ ಕಾಲೇಜು ವಿರುದ್ಧ ಪ್ರತಿಭಟನೆ: ಶಿಕ್ಷಕರನ್ನು ಕೂಡಿ ಹಾಕಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ

ಕಳೆದೆರಡು ವರ್ಷಗಳಿಂದ ಫಲಿತಾಂಶ ಪ್ರಕಟಿಸಿದ ಕಾಲೇಜೊಂದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ವಿದ್ಯಾರ್ಥಿಯೊಬ್ಬ ಶಿಕ್ಷಕರನ್ನು ಕೊಠಡಿಯೊಳಗೆ ಕೂಡಿ ಹಾಕಿ, ಆತ್ಮಹತ್ಯೆಗೆ ಯತ್ನಿಸಿರುವ ಘಟನೆಯೊಂದು...

ಅಥಣಿ: ಕಳೆದೆರಡು ವರ್ಷಗಳಿಂದ ಫಲಿತಾಂಶ ಪ್ರಕಟಿಸಿದ ಕಾಲೇಜೊಂದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ವಿದ್ಯಾರ್ಥಿಯೊಬ್ಬ ಶಿಕ್ಷಕರನ್ನು ಕೊಠಡಿಯೊಳಗೆ ಕೂಡಿ ಹಾಕಿ, ಆತ್ಮಹತ್ಯೆಗೆ ಯತ್ನಿಸಿರುವ ಘಟನೆಯೊಂದು ಅಥಣಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ನಡೆದಿದೆ.

ಪರೀಕ್ಷಾ ಶುಲ್ಕ ಕಟ್ಟದ ಹಿನ್ನೆಲೆಯಲ್ಲಿ ಬಿಎ. ಬಿಕಾಂ ಮತ್ತು ಬಿಎಸ್ ಸಿ ಕೋರ್ಸ್ ನ 90 ವಿದ್ಯಾರ್ಥಿಗಳ ಫಲಿತಾಂಶವನ್ನು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ತಡೆಹಿಡಿದಿತ್ತು. ಶುಲ್ಕ ಕಟ್ಟಿದ ವಿದ್ಯಾರ್ಥಿಗಳಿಗೆ ರಸೀದಿ ಕೊಟ್ಟ ಹಿನ್ನೆಲೆಯಲ್ಲಿ ರಸೀದಿಯನ್ನು ಕಾಲೇಜಿಗೆ ನೀಡಿದ ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಆದರೆ, ಶುಲ್ಕ ಕಟ್ಟದ ವಿದ್ಯಾರ್ಥಿಗಳ ಫಲಿತಾಂಶವನ್ನು ಕಾಲೇಜು ತಡೆಹಿಡಿದಿದೆ.
 
ಇದರಂತೆ ತಾನು ಪರೀಕ್ಷೆಯನ್ನೇ ಬರೆದಿಲ್ಲ ಎಂದು ಕುಟುಂಬಸ್ಥರು ಹೇಳುತ್ತಿದ್ದು, ಸತ್ಯ ಹೇಳಿದರೂ ನಂಬುತ್ತಿಲ್ಲ ಎಂದು ಹೇಳಿ ಕಾಲೇಜಿನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಮನಪ್ಪ ಜಮದಾರ್ ಎಂಬ ವಿದ್ಯಾರ್ಥಿ ಕಾಲೇಜಿನ ಮಹಡಿ ಮೇಲಿಂದ ಬೀಳಲು ಯತ್ನಿಸಿದ್ದಾನೆ. ಈ ವೇಳೆ ಕೆಲ ಸಿಬ್ಬಂದಿಗಳು ಬಂದು ಆತನನ್ನು ತಡೆದಿದ್ದಾರೆ.

ನಂತರ ಕೊಠಡಿಯಿಂದ ಹೊರಬಂದ ಸಿಬ್ಬಂದಿಗಳು ಹಾಗೂ ಪ್ರಾಂಶುಪಾಲ ಜೆಪಿ. ದೊಡ್ಡಮಣಿ ಅವರು, ಶೀಘ್ರದಲ್ಲೇ ವಿದ್ಯಾರ್ಥಿಗಳ ಸಮಸ್ಯೆಯನ್ನು ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

SCROLL FOR NEXT