ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಸಿಗ್ನಲ್ ನಲ್ಲಿ ವ್ಹೀಲಿಂಗ್, ಯುವಕನ ಬಂಧನ

ಬಾಣಸವಾಡಿ ಸಮೀಪದ ಹೊರ ವರ್ತುಲ ರಸ್ತೆಯಲ್ಲಿ ಬೈಕ್‌ ವ್ಹೀಲಿಂಗ್‌ ಮಾಡುತ್ತಿದ್ದ ಆರೋಪದಡಿ  ಯುವಕನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ..,.

ಬೆಂಗಳೂರು: ಬಾಣಸವಾಡಿ ಸಮೀಪದ ಹೊರ ವರ್ತುಲ ರಸ್ತೆಯಲ್ಲಿ ಬೈಕ್‌ ವ್ಹೀಲಿಂಗ್‌  ಮಾಡುತ್ತಿದ್ದ ಆರೋಪದಡಿ  ಯುವಕನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ನಾಗವಾರದ ಮಹಮ್ಮದ್‌ ರಿಯಾಜ್‌, ಬಂಧಿತ ಆರೋಪಿ. ಸೆ. 15ರಂದು ಹೊರವರ್ತುಲ ರಸ್ತೆಗೆ ಕರ್ಕಶ ಶಬ್ದ ಮಾಡುತ್ತಿದ್ದ ತನ್ನ ಯಮಹಾ ಬೈಕ್‌ ತೆಗೆದುಕೊಂಡು ಬಂದಿದ್ದ ರಿಯಾಜ್‌, ವ್ಹೀಲಿಂಗ್‌ ಮಾಡುತ್ತಿದ್ದ. ಈ ವೇಳೆ ಹಲವು ವಾಹನಗಳಿಗೆ ಅಡ್ಡಿಪಡಿಸಿದ್ದ. ಆ ಬಗ್ಗೆ ಸಾರ್ವಜನಿಕರೊಬ್ಬರು ನೀಡಿದ್ದ ಮಾಹಿತಿ ಮೇರೆಗೆ ಸ್ಥಳಕ್ಕೆ ಹೋಗಿ ಆತನನ್ನು ಬಂಧಿಸಲಾಯಿತು. ಬಂಧಿತನ ಬಳಿ ಡ್ರೈವಿಂಗ್ ಲೈಸೆನ್ಸ್ ಇರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಹೊರವರ್ತುಲ ರಸ್ತೆಯಲ್ಲಿ ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಅವರು ಮಧ್ಯಾಹ್ನ ಊಟ ಹಾಗೂ ಸಂಜೆ ಚಹಾ ವಿರಾಮ ಪಡೆಯುತ್ತಿದ್ದರು. ಪೊಲೀಸರಿಲ್ಲದ ಸಮಯವನ್ನು ನೋಡಿ ವ್ಹೀಲಿಂಗ್ ಮಾಡುತ್ತಿದ್ದ ರಿಯಾಜ್, ಅಷ್ಟರಲ್ಲಿ ಸ್ಥಳಕ್ಕೆ ಬಂದ ಪೊಲೀಸರನ್ನ ನೋಡಿ ರಿಯಾಜ್ ಪರಾರಿಯಾಗಲು ಯತ್ನಿಸಿದ್ದ. ಈ ವೇಳೆ ಕಾರ್ಯ ಪ್ರವೃತ್ತರಾದ ಪೋಲೀಸರು ಆತನನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT