ಸಂಗ್ರಹ ಚಿತ್ರ 
ರಾಜ್ಯ

ರಾಜ್ಯ ಪೊಲೀಸರಿಗೆ ಶೇ.35 ರಷ್ಟು ವೇತನ ಹೆಚ್ಚಳಕ್ಕೆ ಸಮಿತಿ ಶಿಫಾರಸು

ರಾಜ್ಯ ಪೊಲೀಸ್‌ ಅಧಿಕಾರಿ ಮತ್ತು ಸಿಬ್ಬಂದಿ ವೇತನವನ್ನು ಶೇ 30 ರಿಂದ 35ರಷ್ಟು ಹೆಚ್ಚಿಸುವಂತೆ ರಾಘವೇಂದ್ರ ಔರಾದಕರ್ ನೇತೃತ್ವದ ಪೊಲೀಸ್‌ ವೇತನ ...

ಬೆಂಗಳೂರು: ರಾಜ್ಯ ಪೊಲೀಸ್‌ ಅಧಿಕಾರಿ ಮತ್ತು ಸಿಬ್ಬಂದಿ ವೇತನವನ್ನು ಶೇ 30 ರಿಂದ 35ರಷ್ಟು ಹೆಚ್ಚಿಸುವಂತೆ  ರಾಘವೇಂದ್ರ ಔರಾದಕರ್ ನೇತೃತ್ವದ ಪೊಲೀಸ್‌ ವೇತನ ಪರಿಷ್ಕರಣಾ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ರಾಘವೇಂದ್ರ ಔರಾದಕರ್  ಅವರ ನೇತೃತ್ವದಲ್ಲಿ ರಚಿಸಿದ ವೇತನ ಪರಿಷ್ಕರಣಾ ಸಮಿತಿ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಅವರಿಗೆ ಸೋಮವಾರ ವರದಿ ಸಲ್ಲಿಸಿತು.

ಸಮಿತಿಯ ಶಿಫಾರಸು ಆಧರಿಸಿ ವೇತನ ಪರಿಷ್ಕರಿಸಿದರೆ ಅಧಿಕಾರಿ ಮತ್ತು ಸಿಬ್ಬಂದಿಗೆ ರು. 6,500 ರಿಂದ ರು. 8,500 ರವರೆಗೆ ಹೆಚ್ಚಳವಾಗಲಿದೆ.

ವರದಿ ಸ್ವೀಕರಿಸಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಜಿ. ಪರಮೇಶ್ವರ್‌ ಅವರು, ವರದಿಯ ಶಿಫಾರಸುಗಳ ಕುರಿತು ಮುಖ್ಯಮಂತ್ರಿ ಜತೆ ಚರ್ಚಿಸಲಾಗುವುದು. ಹಣಕಾಸು ಇಲಾಖೆಯ ಅನುಮೋದನೆ ಪಡೆದ ಬಳಿಕ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ವೇತನ ಪರಿಷ್ಕರಣೆಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು, ಹಾಲಿ ಕರ್ತವ್ಯದಲ್ಲಿರುವ ಸಿಬ್ಬಂದಿ ವೇತನ ಹೆಚ್ಚಿಸಿದರೆ ಸರ್ಕಾರಕ್ಕೆ ವಾರ್ಷಿಕ ರು.875 ಕೋಟಿ ಹೆಚ್ಚುವರಿ ಹೊರೆ ಬೀಳಲಿದೆ ಎಂದು ಅವರು ತಿಳಿಸಿದ್ದಾರೆ.

ವೇತನ ಪರಿಷ್ಕರಿಸಿದರೆ ಹೆಡ್‌ ಕಾನ್‌ಸ್ಟೆಬಲ್‌ಗಳು ಪಡೆಯುತ್ತಿರುವ ವೇತನ ಕಾನ್‌ಸ್ಟೆಬಲ್‌ಗಳಿಗೆ ಸಿಗಲಿದೆ. ಈಗ ಇರುವ ವೇತನ ಪದ್ಧತಿಯನ್ವಯ ಕಾನ್‌ಸ್ಟೆಬಲ್‌ಗಳಿಗೆ ಮೂಲವೇತನ ಮತ್ತು ವಿವಿಧ ಭತ್ಯೆ ಸೇರಿ ರು. 19,606  ಮಾಸಿಕ ಸಂಬಳ ಸಿಗುತ್ತಿದೆ. ಪರಿಷ್ಕರಿಸಿದ ಬಳಿಕ ಈ ಮೊತ್ತ ರು. 23,350 ಕ್ಕೆ ಏರಿಕೆಯಾಗಲಿದೆ ಎಂದು ವಿವರಿಸಿದರು.

ಪೊಲೀಸರ ವೇತನ ಪರಿಷ್ಕರಿಸಬೇಕು ಎಂಬ ಬೇಡಿಕೆ ಹಲವು ವರ್ಷಗಳಿಂದಲೂ ಇತ್ತು. ಈ  ಕಾರಣದಿಂದಾಗಿ ಪರಿಷ್ಕರಣಾ ಸಮಿತಿ ರಚಿಸಲಾಗಿತ್ತು. ವಿವಿಧ ರಾಜ್ಯಗಳಲ್ಲಿನ ಪೊಲೀಸ್‌ ಸಿಬ್ಬಂದಿ ವೇತನ ಶ್ರೇಣಿಯನ್ನು ಅಧ್ಯಯನ ಮಾಡಿ ಸಮಿತಿ ವರದಿ ಸಲ್ಲಿಸಿದೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ದೇಶದಲ್ಲಿ ಎಂಟನೆ ಸ್ಥಾನದಲ್ಲಿದೆ. ವೇತನ ಪರಿಷ್ಕರಣೆಯಾದ ಬಳಿಕ ಕರ್ನಾಟಕ ಐದನೆ ಸ್ಥಾನಕ್ಕೆ ಏರಲಿದೆ ಎಂದು ಹೇಳಿದರು.

ನಾಗರಿಕ ಮತ್ತು ಸಂಚಾರ ಪೊಲೀಸರಿಗೆ ವಿಶೇಷ ಭತ್ಯೆ ರು.1,000,  ದೈಹಿಕ ಆರೋಗ್ಯ ಭತ್ಯೆ ರು.500 ಮತ್ತು ಸಮವಸ್ತ್ರ ಭತ್ಯೆ ರು. 500 ಹಾಗೂ 3 ದಿನ ವಿಶ್ರಾಂತಿರಹಿತ ಸೇವಾ ಭತ್ಯೆ ರು. 2,500 ಹೆಚ್ಚಿಸಬೇಕು ಎಂದು ಸಮಿತಿ ಶಿಫಾರಸು ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

SCROLL FOR NEXT